News & Events
ಯುವ ಶಕ್ತಿಯ ಸದ್ಬಳಕೆಗೆ ಎನ್ನೆಸ್ಸೆಸ್ ವೇದಿಕೆ
ಪೆರ್ಲ: ಭಾರತದಂತಹ ರಾಷ್ಟ್ರದಲ್ಲಿ ಯುವ ಜನಾಂಗವೇ ಪ್ರಧಾನ ಸಂಪತ್ತು. ಸೂಕ್ತ ಮಾರ್ಗದರ್ಶನ ಹಾಗೂ ಅರಿವಿನ ಕೊರತೆಯಿಂದಾಗಿ ಯುವ ಜನಾಂಗ ತಪ್ಪು ದಾರಿ ಹಿಡಿಯುತ್ತಿದೆ. ಯುವ ಶಕ್ತಿಯ ಸದ್ಬಳಕೆ ಮಾಡುವಲ್ಲಿ ಎನ್ನೆಸ್ಸೆಸ್ ಸೂಕ್ತ ವೇದಿಕೆ ಎಂದು 2011-12 ಸಾಲಿನ ರಾಷ್ಟ್ರದ ಉತ್ತಮ ಎನ್ನೆಸ್ಸೆಸ್ ಘಟಕ ಪ್ರಶಸ್ತಿಯನ್ನು ಸ್ವೀಕರಿಸಿದ, 3 ಬಾರಿ ಕಣ್ಣೂರು ವಿಶ್ವವಿದ್ಯಾಲಯದಿಂದ ಉತ್ತಮ ಎನ್ನೆಸ್ಸೆಸ್ ಯೋಜನಾಧಿಕಾರಿ ಪ್ರಶಸ್ತಿ ಪಡೆದುಕೊಂಡ ಮೊಹಮ್ಮದ್ ಅಲಿ ಹೇಳಿದರು. ಪೆರ್ಲ ನಾಲಂದ ಕಾಲೇಜಿನ ಎನ್ನೆಸ್ಸೆಸ್ ಘಟಕದ ಪ್ರಥಮ ವರ್ಷ ವಿದ್ಯಾರ್ಥಿಗಳಿಗೆ ಒರಿಯೆಂಟೇಶನ್ ತರಗತಿ ನಡೆಸಿ,
ಕೇರಳದ ನೆರೆ ಸಂತ್ರಸ್ತರಿಗೆ ವಸ್ತು ಸಂಗ್ರಹ
ಕೇರಳದ ನೆರೆ ಸಂತ್ರಸ್ತರಿಗೆ ನಿತ್ಯೋಪಯೋಗಿ ವಸ್ತುಗಳನ್ನು ಒದಗಿಸುವ ಉದ್ದೇಶದೊಂದಿಗೆ ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ ಸಂಗ್ರಹಿಸಿದ ವಸ್ತುಗಳನ್ನು ಜಿಲ್ಲಾಧಿಕಾರಿ ಸಜಿತ್ ಬಾಬು ಅವರಿಗೆ ಹಸ್ತಾಂತರಿಸಲಾಯಿತು. ಕಾಮರ್ಸ್ ಹಾಗೂ ಮ್ಯಾನೇಜ್ಮೆಂಟ್ ವಿಭಾಗದ ಉಪನ್ಯಾಸಕ ಅಜಿತ್, ಎನ್ನೆಸ್ಸೆಸ್ ಕಾರ್ಯದರ್ಶಿ ಜಗತ್, ಸದಸ್ಯ ಪ್ರದೀಪ್ ಉಪಸ್ಥಿತರಿದ್ದರು.
ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ನೇತೃತ್ವದಲ್ಲಿ ನೆರೆ ಪರಿಹಾರ ನಿಧಿ ಸಂಗ್ರಹ
ಪೆರ್ಲ: ಕೇರಳದ ನೆರೆ ಸಂತ್ರಸ್ತರಿಗೆ ನಿತ್ಯೋಪಯೋಗಿ ವಸ್ತುಗಳನ್ನು ಒದಗಿಸುವ ಉದ್ದೇಶದೊಂದಿಗೆ ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ನೇತೃತ್ವದಲ್ಲಿ ಸೋಮವಾರ ಪೆರ್ಲ ಪೇಟೆಯಲ್ಲಿ ನೆರೆ ಪರಿಹಾರ ನಿಧಿ ಸಂಗ್ರಹಿಸಲಾಯಿತು. ಎನ್ನೆಸ್ಸೆಸ್ ಯೋಜನಾಧಿಕಾರಿ ಸುರೇಶ್ ಕೆ ಎಂ. ಮಾತನಾಡಿ, ನೆರೆಯಿಂದಾಗಿ ಯಾವುದೇ ಸಮಸ್ಯೆ ಎದುರಿಸದೇ, ಬೆಚ್ಚಗಿನ ಮನೆಯಲ್ಲಿ ವಾಸಿಸುತ್ತ, ೩ ಹೊತ್ತು ಹೊಟ್ಟೆ ತುಂಬಾ ಆಹಾರ ಸೇವಿಸುವ, ಬಣ್ಣ ಬಣ್ಣದ ಬಟ್ಟೆ ಧರಿಸುವ, ನಾವು ಪುಣ್ಯವಂತರು. ಆದರೆ ಭೀಕಾರ ಮಳೆಯಿಂದಾಗಿ ಉಂಟಾದ ನೆರೆಯಿಂದಾಗಿ, ತಮ್ಮದನ್ನೆಲ್ಲ ಕಳೆದುಕೊಂಡ, ಮನೆಯಿಲ್ಲದೇ ನಿರಾಶ್ರಿತರ
ಯುವಜನಾಂಗ ರಾಷ್ಟ್ರದ ರಕ್ಷಣೆಗೆ ಮುಂದಾಗಿ
ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಭಾರತವನ್ನು ಭಯೋತ್ಪಾದನೆ ಮುಂತಾದ ರಾಷ್ಟ್ರದ ಭದ್ರತೆಗೆ ಸವಾಲೊಡ್ಡುವ ಹಲವಾರು ಸಮಸ್ಯೆಗಳು ಕಾಡುತ್ತಿದ್ದು, ಯುವಜನಾಂಗ ರಾಷ್ಟ್ರದ ರಕ್ಷಣೆಗೆ ಮುಂದಾಗಬೇಕು ಎಂದು ಗಡಿ ರಕ್ಷಣಾ ಪಡೆಯ ಯೋಧ ಬಾಲಕೃಷ್ಣ ಬಿ. ಹೇಳಿದರು. ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ನೇತೃತ್ವದಲ್ಲಿ ಜರಗಿದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ, ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ಸ್ವಾರ್ಥಕ್ಕೆ ರಾಷ್ಟ್ರಹಿತವನ್ನು ಬಲಿಕೊಡದೆ, ರಾಷ್ಟ್ರದ ಹಿತ ನಮ್ಮೆಲ್ಲರ ಹಿತವೆಂಬ ಸಂಕಲ್ಪವನ್ನು ಯುವಜನಾಂಗ ಕೈಗೊಳ್ಳಬೇಕು. ರಾಷ್ಟ್ರದ ಐಕ್ಯತೆ, ಸಮಗ್ರತೆಗೆ ಧಕ್ಕೆಯಾಗದಂತೆ
ಜಪಾನ್ನ ಸಾಧನೆ ಯುವಜನಾಂಗಕ್ಕೆ ಸ್ಫೂರ್ತಿದಾಯಕ
ಅಣುಬಾಂಬು ಸ್ಫೋಟದ ಪರಿಣಾಮವಾಗಿ ತತ್ತರಿಸಿ ಹೋಗಿದ್ದ ಜಪಾನ್ ವಿಶ್ವದ ಆರ್ಥಿಕತೆಯಲ್ಲಿ ಎರಡನೇ ಸ್ಥಾನದಲ್ಲಿದ್ದು, ತಂತ್ರಜ್ಞಾನದಲ್ಲಿ, ಕೈಗಾರಿಕಾ ಕ್ಷೇತ್ರದಲ್ಲಿ ಮಾಡಿದ ಸಾಧನೆ ಯುವಜನಾಂಗಕ್ಕೆ ಸ್ಪೂರ್ತಿದಾಯಕ ಎಂದು ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ಅಮೃತಾ ಹೇಳಿದರು. ಹೀರೋಷಿಮಾ ದಿನದ ಅಂಗವಾಗಿ ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ವತಿಯಿಂದ ನಡೆದ ಸಭಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಅಮೇರಿಕಾ ಜಪಾನ್ ನ ಹೀರೋಷಿಮಾ ಎನ್ನುವ ಪ್ರದೇಶಕ್ಕೆ ಅಣುಬಾಂಬು ಹಾಕಿ ೭೪ ವರ್ಷ ಕಳೆದಿದ್ದು, ಸವಾಲುಗಳನ್ನು ಮೆಟ್ಟಿ ನಿಂತು ವಿಶ್ವದ ಅಗ್ರಗಣ್ಯ
ಕಠಿಣ ಪರಿಶ್ರಮ ಹಾಗೂ ಆತ್ಮವಿಶ್ವಾಸದಿಂದ ಸವಾಲುಗಳನ್ನು ಎದುರಿಸಿ
ವಿದ್ಯಾರ್ಥಿಗಳು ತಮ್ಮ ಕನಸ್ಸನ್ನು ನನಸಾಗಿಸಲು ಪ್ರಯತ್ನಿಸುವಾಗ ಹಲವಾರು ಸವಾಲುಗಳನ್ನು ಎದುರಿಸಬೇಕಾದೀತು, ಅವುಗಳನ್ನೆಲ್ಲ ಕಠಿಣ ಪರಿಶ್ರಮ ಹಾಗೂ ಆತ್ಮ ವಿಶ್ವಾಸದಿಂದ ಎದುರಿಸಿ, ಕನಸ್ಸನ್ನು ನನಸಾಗಿಸಲು ಪ್ರಯತ್ನಿಸಬೇಕು ಎಂದು ಕಣ್ಣೂರು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ, ಕಾಸರಗೋಡು ಸರಕಾರಿ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ| ವಿಜಯನ್ ಕೆ. ಹೇಳಿದರು. ಪೆರ್ಲ ನಾಲಂದ ಮಹಾವಿದ್ಯಾಲಯದಲ್ಲಿ ಗುರುವಾರ ಜರಗಿದ ಧತ್ತಿ ನಿಧಿ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕನಸು ಕಾಣಲು ಸಿದ್ಧರಾಗಿ ಇರದಿದ್ದಲ್ಲಿ ಅವನ ವೈಯಕ್ತಿಕ
ಪ್ರತಿ ಮನೆ ಮನೆಯಲ್ಲೂ ಒಬ್ಬ ಸೈನಿಕ ಹುಟ್ಟಲಿ
ಪೆರ್ಲ: ರಾಷ್ಟ್ರ ಸುರಕ್ಷಿತವಾಗಿದ್ದಲ್ಲಿ ಮಾತ್ರ ನಾವು ನಿರ್ಭಯವಾಗಿ ಜೀವಿಸಲು ಸಾಧ್ಯ. ರಾಷ್ಟ್ರದ ರಕ್ಷಣೆಗಾಗಿ ಪ್ರತಿ ಮನೆ ಮನೆಯಲ್ಲಿ ಒಬ್ಬ ಸೈನಿಕ ಹುಟ್ಟಲಿ, ತನ್ನ ಜೀವನವನ್ನು ರಾಷ್ಟ್ರ ಸೇವೆಗೆ ಮೀಸಲಿಡುವಂತಾಗಲಿ ಎಂದು ಕಾಲೇಜಿನ ಅಂಗ್ಲಬಾಷಾ ಉಪನ್ಯಾಸಕಿ ಸವಿತಾ ಡಿ. ಶೆಟ್ಟಿ ಹೇಳಿದರು. ೨೦ನೇ ವರ್ಷದ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಪೆರ್ಲ ನಾಲಂದ ಕಾಲೇಜಿನ ಎನ್ನೆಸ್ಸೆಸ್ ಘಟಕದ ನೇತೃತ್ವದಲ್ಲಿ ಶುಕ್ರವಾರ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾರ್ಗಿಲ್ ವಿಜಯ ದಿವಸ ಒಂದು ದಿನಕ್ಕೆ ಮಾತ್ರ
ಅಧ್ಯಯನ ಶೀಲ ಸೂತ್ರ ಅಳವಡಿಸಿದಲ್ಲಿ ಉತ್ತಮ ಅಂಕ
ವಿಷಯಗಳನ್ನು ಸರಿಯಾಗಿ ಮನನ ಮಾಡಿ ಅರ್ಥೆಸಿ ಓದಿದಲ್ಲಿ ಪರೀಕ್ಷೆಯಲ್ಲಿ ಎದುರಾಗುವ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ಬರೆಯಲು ಸಾಧ್ಯ ಎಂದು ಮನಶಾಸ್ತ್ರಜ್ಞ, ಪುನರ್ನವ ಟ್ರಸ್ಟ್ ನ ಟ್ರಸ್ಟಿ ನವೀನ್ ಎಲ್ಲಂಗಳ ಹೇಳಿದರು. ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ ನೇತೃತ್ವದಲ್ಲಿ ನಡೆದ ’ಸ್ಟಡಿ ಸ್ಕಿಲ್ಸ್ ಹಾಗೂ ಗೋಲ್ ಸೆಟ್ಟಿಂಗ್’ ತರಬೇತಿ ನೀಡಿ ಮಾತನಾಡಿದರು. ಪರೀಕ್ಷಾ ಸಮಯದಲ್ಲಿ ಮಾತ್ರ ಸಿದ್ಧತೆ ನಡೆಸುವುದು ಸೂಕ್ತವಲ್ಲ.ಶೆಕ್ಷಣಿಕ ವರ್ಷದ ಪ್ರಾರಂಭದಲ್ಲೇ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ವಿಷಯ ಮನದಟ್ಟಾಗಿ ಪರೀಕ್ಷೆಯಲ್ಲಿ ಯಾವುದೇ ಪ್ರಶ್ನೆಗಳು ಬಂದರೂ ಸಮರ್ಪಕ
ಪೆರ್ಲದ ವಿವೇಕಾನಂದ ಶಿಶುಮಂದಿರದಲ್ಲಿ ಗುರು ಪೂರ್ಣಿಮಾ ಆಚರಣೆ
ಪೆರ್ಲದ ವಿವೇಕಾನಂದ ಶಿಶುಮಂದಿರದಲ್ಲಿ ಸಮಿತಿ ಅಧ್ಯಕ್ಷೆ ನಳಿನಿ ಸೈಪಂಗಲ್ಲು ಇವರ ಅಧ್ಯಕ್ಷತೆಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಕಾಟುಕುಕ್ಕೆಯ ಬಾಲಪ್ರಭಾ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಶ್ರೀಪತಿ ಖಂಡೇರಿ ಇವರು ಗುರುಗಳನ್ನು ಪೂಜಿಸೋ ಭಾರತೀಯ ಸಂಸ್ಕೃತಿ ಇವತ್ತು ನಿನ್ನೆಯದಲ್ಲ. ಗುರುಕುಲ ಪದ್ಧತಿಯಿಂದಲೇ ಇತ್ತು. ವೇದವ್ಯಾಸರು ಮಹರ್ಷಿಗಳೂ ಗುರುವಾಗಿದ್ದರು. ಆಷಾಢ ಮಾಸದ ಈ ಹುಣ್ಣಿಮೆ ಅವರ ಜನ್ಮದಿನವಾಗಿದ್ದು ದೇಶದಾದ್ಯಂತ ಇಂದು ಅವರನ್ನು ಸ್ಮರಿಸುವ ದಿನವನ್ನಾಗಿ ಆಚರಿಸಲಾಗುತ್ತದೆ. ಬಾಲ್ಯದಲ್ಲಿಎಂಥ ಸಂಸ್ಕಾರ ನಮಿಗೆ ಲಭಿಸುವುದೋ ಆ ರೀತಿಯಲ್ಲಿಯೇ
ಅಂತಾರಾಷ್ಟ್ರೀಯ ನ್ಯಾಯ ದಿನಾಚರಣೆ
ಪೆರ್ಲ: ವಿಶ್ವವೇ ಒಂದು ಕುಟುಂಬ ಎಂಬ ಭಾವನೆ ಬೆಳೆದಂತೆ ಜಾಗತಿಕ ಸಮಸ್ಯೆಗಳನ್ನು ಸೌಹಾರ್ದ ಹಾಗೂ ಕಾನೂನು ಬದ್ಧವಾಗಿ ಬಗೆ ಹರಿಸಲು ಅಂತಾರಾಷ್ಟೀಯ ನ್ಯಾಯಾಲಯ ಸ್ಥಾಪಿತವಾಗಿದೆ ಎಂದು ನಾಲಂದ ಕಾಲೇಜು ಜಿಯೋಗ್ರಾಫಿ ವಿಭಾಗದ ಉಪನ್ಯಾಸಕಿ ಸುಮಾ ಹೇಳಿದರು. ಕಾಲೇಜು ಎನ್ನೆಸ್ಸೆಸ್ ಘಟಕ ನೇತೃತ್ವದಲ್ಲಿ ಬುಧವಾರ ನಡೆದ ಅಂತಾರಾಷ್ಟ್ರೀಯ ನ್ಯಾಯ ದಿನ ಸಮಾರಂಭದಲ್ಲಿ ಅವರು ಮಾತನಾಡಿದರು. ವ್ಯಕ್ತಿ ಶೋಷಣೆ, ತೊಂದರೆಗೊಳಗಾದಾಗ ಆ ಪರಿಸ್ಥಿತಿಯಿಂದ ರಕ್ಷಣೆ ಪಡೆಯುವ ಹಕ್ಕು ಅವನಿಗಿದೆ. ಸಮಸ್ಯೆಗಳ ನಿವಾರಣೆಗೆ ನೀತಿ ನಿಯಮ, ಕಾನೂನಿನ ವ್ಯವಸ್ಥೆ ಕಲ್ಪಿಸಲಾಗಿದೆ. ಅದೇ