News & Events
ಟೆಲೆಂಟ್ಸ್ ಹಂಟ್ 2ಕೆ20
ಸೋತರೆ ಕುಗ್ಗಬೇಡಿ, ಗೆದ್ದರೆ ಹಿಗ್ಗಬೇಡಿ ಪೆರ್ಲ ನಾಲಂದ ಕಾಲೇಜಿನಲ್ಲಿ ನಡೆದ ’ಟೆಲೆಂಟ್ಸ್ ಹಂಟ್ 2ಕೆ20’ ಸಮಾರೋಪ ಕಾರ್ಯಕ್ರಮದಲ್ಲಿ ಶಶಿಭೂಷಣ ಶಾಸ್ತ್ರಿ ಸೋತವರು ಕುಗ್ಗಬಾರದು, ಗೆದ್ದವರು ಹಿಗ್ಗಬಾರದು. ಸೋತವರು ಮುಂದಿನ ಸ್ಪರ್ಧೆಗಳಿಗೆ ಬೇಕಾದ ತಯಾರಿಯಲ್ಲಿ ತೊಡಗಬೇಕು. ಗೆದ್ದವರು ತಾವು ಬಂದ ದಾರಿಯನ್ನು ಮೆಲುಕು ಹಾಕುತ್ತಾ, ಸೋತವರನ್ನು ಹೀಯಾಳಿಸದೇ ಸನ್ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಪೆರ್ಲ ಸೇವಾ ಸಹಕಾರಿ ಬ್ಯಾಂಕ್ನ ಅಧ್ಯಕ್ಷ, ನಾಲಂದ ಕಾಲೇಜು ಆಡಳಿತ ಮಂಡಳಿಯ ಸದಸ್ಯ ಶಶಿಭೂಷಣ ಶಾಸ್ತ್ರಿ ಹೇಳಿದರು. ಪೆರ್ಲ ನಾಲಂದ ಕಾಲೇಜಿನಲ್ಲಿ ಹೈಯರ್ ಸೆಕೆಂಡರಿ ಹಾಗೂ ಕಾಲೇಜು
ಹುತಾತ್ಮರ ದಿನಾಚರಣೆ
ಗಾಂಧೀಜಿಯ ಅಹಿಂಸಾ ನಡೆ ಮಾದರಿ : ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ನೇತೃತ್ವದಲ್ಲಿ ನಡೆದ ಹುತಾತ್ಮರ ದಿನಾಚರಣೆಯಲ್ಲಿ ಉಪನ್ಯಾಸಕಿ ವಿನೀಷಾ ಹಿಂಸೆಯಿಂದ ಸಾಧಿಸಲು ಅಸಾಧ್ಯವಾದುದನ್ನು ಅಹಿಂಸೆಯಿಂದ ಸಾಧಿಸಬಹುದು ಎಂದು ಸ್ವಾತಂತ್ರ್ಯ ಹೋರಾಟದ ಮುಖಾಂತರ ಜಗತ್ತಿಗೆ ಸಾರುವಲ್ಲಿ ಗಾಂಧೀಜಿ ಯಶಸ್ವಿಯಾಗಿದ್ದರು. ಗಾಂಧೀಜಿಯ ಅಹಿಂಸಾ ನಡೆ ಪ್ರತಿ ರಾಷ್ಟ್ರಕ್ಕೂ, ಪ್ರತಿ ವ್ಯಕ್ತಿಗೂ ಮಾದರಿ ಎಂದರು. ಎಂದು ಮಲಯಾಳಂ ವಿಭಾಗದ ಉಪನ್ಯಾಸಕಿ ವಿನೀಷಾ ಹೇಳಿದರು. ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ನೇತೃತ್ವದಲ್ಲಿ ನಡೆದ ಹುತಾತ್ಮರ ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ
ಅವಕಾಶಗಳನ್ನು ಸದುಪಯೋಗಪಡಿಸಿಕೊಂಡಾಗ ಪ್ರತಿಭೆಗಳ ಅನಾವರಣ
ಪೆರ್ಲ ನಾಲಂದ ಕಾಲೇಜಿನಲ್ಲಿ ನಡೆದ ಟೆಲೆಂಟ್ಸ್ ಹಂಟ್ 2ಕೆ20 ಉದ್ಘಾಟಿಸಿ ಕಜಂಪಾಡಿ ಸುಬ್ರಮಣ್ಯ ಭಟ್ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಒಂದೊಂದು ರೀತಿಯ ವಿಶಿಷ್ಟ ಪ್ರತಿಭೆ ಅಡಕವಾಗಿದೆ. ಆ ಪ್ರತಿಭೆಗಳು ತನ್ನಲ್ಲಿ ಅಡಕವಾಗಿದೆ ಎಂದು ತಿಳಿಯಲು ಸಾಧ್ಯವಾಗದ ಕಾರಣ ಅವುಗಳು ಸುಪ್ತವಾಗಿಯೇ ಇರುತ್ತದೆ. ಪ್ರತಿಭೆಗಳ ಪ್ರದರ್ಶನಕ್ಕೆ ಲಭಿಸಿದ ಅವಕಾಶವನ್ನು ಸದುಪಯೋಗಪಡಿಸಿಕೊಂಡಾಗ ಆ ಪ್ರತಿಭೆಗಳು ಅನಾವರಣಗೊಳ್ಳುತ್ತದೆ ಎಂದು ನಾಲಂದ ಕಾಲೇಜು ಆಡಳಿತ ಮಂಡಳಿ ಆಹ್ವಾನಿತ ಗೌರವ ಸಲಹೆಗಾರ, ನಾಲಂದ ಟ್ರಸ್ಟ್ ಅಧ್ಯಕ್ಷ ಕಜಂಪಾಡಿ ಸುಬ್ರಮಣ್ಯ ಭಟ್ ಹೇಳಿದರು. ಹೈಯರ್ ಸೆಕೆಂಡರಿ ಹಾಗೂ ಕಾಲೇಜು
ವಿದ್ಯಾರ್ಥಿಗಳಲ್ಲಿ ಪ್ರಚಲಿತ ವಿದ್ಯಮಾನಗಳ ಅರಿವು ಅಗತ್ಯ
ಬಿ – ಕ್ವಿಜ್ 2019 ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಡಾ.ವಿಘ್ನೇಶ್ವರ ವರ್ಮುಡಿ ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆ ಇದ್ದರೆ ಏನನ್ನೂ ಸಾಧಿಸಬಹುದು. ಇತ್ತೀಚಿನ ದಿನಗಳಲ್ಲಿ ಜ್ಞಾನದಾಹ ಕಡಿಮೆಯಾಗುತ್ತಿದೆ. ಜೀವನದಲ್ಲಿ ಸಾಧನೆಯ ಗುರಿ, ಛಲ, ಗುರುವಿನ ಆಶೀರ್ವಾದವಿದ್ದರೆ ಮಾತ್ರವೇ ವಿದ್ಯೆ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಸಾಧ್ಯ ಎಂದು ನಾಲಂದ ಮಹಾವಿದ್ಯಾಲಯ ಪ್ರಿನ್ಸಿಪಾಲ್ ಡಾ. ವಿಘ್ನೇಶ್ವರ ವರ್ಮುಡಿ ಹೇಳಿದರು. ಪೆರ್ಲ ನಾಲಂದ ಮಹಾವಿದ್ಯಾಲಯದಲ್ಲಿ ನಡೆದ ಬಿ – ಕ್ವಿಜ್ 2019 ರಸಪ್ರಶ್ನೆ ಫೈನಲ್ ಸ್ಪರ್ಧೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು
ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಸ್ವಚ್ಛತೆಗೆ ಆದ್ಯತೆ ನೀಡಲಿ
ಅಗಲ್ಪಾಡಿ ಶಾಲೆಯಲ್ಲಿ ನಡೆಯುತ್ತಿರುವ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ಸಪ್ತದಿನ ಶಿಬಿರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟಿಸಿ ಶಾಂತ ಎಸ್. ಭಟ್ ವಿದ್ಯಾರ್ಥಿಗಳು ಪುಸ್ತಕ ಜ್ಞಾನಕ್ಕೆ ಸೀಮಿತಗೊಳ್ಳದೆ, ಸುತ್ತು ಮುತ್ತಲಿನ ಪರಿಸರದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ವಾರ್ಡು ಸದಸ್ಯೆ, ಶಿಬಿರದ ಸಂಯೋಜಕ ಸಮಿತಿಯ ಅಧ್ಯಕ್ಷೆ ಶಾಂತ ಎಸ್. ಭಟ್ ಹೇಳಿದರು. ಎನ್ನೆಸ್ಸೆಸ್ ವಿದ್ಯಾರ್ಥಿಗಳು ಸ್ವಚ್ಛತೆಯ ಕಾರ್ಯ ಹಮ್ಮಿಕೊಳ್ಳುವ ಮುಖಾಂತರ ಸಾರ್ವಜನಿಕರಿಗೆ ಸ್ವಚ್ಛತೆಯ ಮಹತ್ವವನ್ನು ಸಾರಿ ಹೇಳಿದ್ದಾರೆ. ಇದೇ ರೀತಿ ಸ್ವಚ್ಛ ಮಾಡುತ್ತಿರಲು ಬೇರೆ ಯಾರಾದರೂ ಬರಬೇಕೆಂದಿಲ್ಲ,
ನಾರಂಪಾಡಿ ಪೇಟೆಯಲ್ಲಿ ಎನ್ನೆಸ್ಸೆಸ್ ಶಿಬಿರಾರ್ಥಿಗಳಿಂದ ನಡೆದ ಸ್ವಚ್ಛತಾ ಆಂದೋಲನಕ್ಕೆ ಶಿವಗಿರಿ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ಸಾಥ್
ಬದಿಯಡ್ಕ: ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ಸಪ್ತದಿನ ಶಿಬಿರದ ಅಂಗವಾಗಿ ನಾರಂಪಾಡಿ ಪೇಟೆಯಲ್ಲಿ ಹಮ್ಮಿಕೊಂಡ ಸ್ವಚ್ಛತಾ ಆಂದೋಲನಕ್ಕೆ ನಾರಂಪಾಡಿ ಶಿವಗಿರಿ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ನ ಸದಸ್ಯರು ಸಾಥ್ ನೀಡಿದರು. ನಾರಂಪಾಡಿ ಶಿವಗಿರಿ ಆರ್ಟ್ಸ್ ಅಂಡ್ ಸೋರ್ಟ್ಸ್ ಕ್ಲಬ್ನ ಅಧ್ಯಕ್ಷ ಸತ್ಯ ಗೋಪಾಲ್ ಮಾತನಾಡಿ, ಊರ ನಾಗರಿಕರು ಮಾಡಬೇಕಾದ ಸ್ವಚ್ಛತಾ ಆಂದೋಲನ, ಎನ್ನೆಸ್ಸೆಸ್ ಶಿಬಿರಾರ್ಥಿಗಳಿಂದ ನಡೆಯುತ್ತಿದ್ದು, ಅವರ ಆ ಸಾಮಾಜಿಕ ಕಳಕಳಿಯೊಂದಿಗೆ ಕೈ ಜೋಡಿಸುವುದು ನಮ್ಮೆಲ್ಲರ ಕರ್ತವ್ಯ
ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಸ್ವಚ್ಛತೆಗೆ ಆದ್ಯತೆ ನೀಡಲಿ
ಅಗಲ್ಪಾಡಿ ಶಾಲೆಯಲ್ಲಿ ನಡೆಯುತ್ತಿರುವ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ಸಪ್ತದಿನ ಶಿಬಿರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟಿಸಿ ಶಾಂತ ಎಸ್. ಭಟ್ ವಿದ್ಯಾರ್ಥಿಗಳು ಪುಸ್ತಕ ಜ್ಞಾನಕ್ಕೆ ಸೀಮಿತಗೊಳ್ಳದೆ, ಸುತ್ತು ಮುತ್ತಲಿನ ಪರಿಸರದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ವಾರ್ಡು ಸದಸ್ಯೆ, ಶಿಬಿರದ ಸಂಯೋಜಕ ಸಮಿತಿಯ ಅಧ್ಯಕ್ಷೆ ಶಾಂತ ಎಸ್. ಭಟ್ ಹೇಳಿದರು. ಎನ್ನೆಸ್ಸೆಸ್ ವಿದ್ಯಾರ್ಥಿಗಳು ಸ್ವಚ್ಛತೆಯ ಕಾರ್ಯ ಹಮ್ಮಿಕೊಳ್ಳುವ ಮುಖಾಂತರ ಸಾರ್ವಜನಿಕರಿಗೆ ಸ್ವಚ್ಛತೆಯ ಮಹತ್ವವನ್ನು ಸಾರಿ ಹೇಳಿದ್ದಾರೆ. ಇದೇ ರೀತಿ ಸ್ವಚ್ಛ ಮಾಡುತ್ತಿರಲು ಬೇರೆ ಯಾರಾದರೂ ಬರಬೇಕೆಂದಿಲ್ಲ,
ಎನ್ನೆಸ್ಸೆಸ್ ಶಿಬಿರಗಳಿಂದ ಜೀವನದ ನೈಜ ಪಾಠ
ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ಸಪ್ತದಿನ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಜಿಲ್ಲಾ ಪಂ. ಸದಸ್ಯ ಅಡ್ವ. ಕೆ. ಶ್ರೀಕಾಂತ್ ಇದ್ದುದರಲ್ಲಿ ತೃಪ್ತಿ ಪಡುತ್ತಾ, ಇದ್ದುದನ್ನು ಹಂಚಿ ತಿನ್ನುವ, ತಪ್ಪುಗಳನ್ನು ತಿದ್ದಿಕೊಳ್ಳುತ್ತಾ, ಪರಿಶ್ರಮದ ಜೀವನದ ಮಹತ್ವ ತಿಳಿಯಪಡಿಸುವ, ಹೊಸ ಹೊಸ ಅರಿವನ್ನು ಪಡೆಯುತ್ತಾ, ಸೇವಾ ಮನೋಭಾವ ಬೆಳೆಸುತ್ತಾ, ಜಾತಿ ಮತ ಭೇಧವಿಲ್ಲದೆ ಒಂದೇ ಕುಟುಂಬದ ಸದಸ್ಯರಂತೆ ಬಾಳಿ ಬದುಕಲು ಕಲಿಸುವ ಎನ್ನೆಸ್ಸೆಸ್ ಶಿಬಿರಗಳಿಂದ ಜೀವನದ ನೈಜ ಪಾಠ ಲಭ್ಯವಾಗುತ್ತದೆ ಎಂದು ಕಾಸರಗೋಡು ಜಿಲ್ಲಾ ಪಂಚಾಯಿತಿ ಸದಸ್ಯ
ಪ್ರಕೃತಿ ಶೋಷಣೆ ಮುಂದುವರಿದಲ್ಲಿ ಮಾನವನ ಅಸ್ತಿತ್ವ ಚರಿತ್ರೆಯ ಪುಟಗಳಲ್ಲಿ ದಾಖಲಾಗುವುದರಲ್ಲಿ ಸಂಶಯವಿಲ್ಲ
ಬದಿಯಡ್ಕ: ಅಗಲ್ಪಾಡಿ ಶಾಲೆಯಲ್ಲಿ ನಡೆದ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ಸಪ್ತದಿನ ಶಿಬಿರದಲ್ಲಿ ಪ್ರಸ್ತುತ ಪರಿಸ್ಥಿತಿಯಲ್ಲಿ ಪರಿಸರ ಸಂರಕ್ಷಣೆಯ ಅಗತ್ಯತೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಜರಗಿತು. ಸಂಪನ್ಮೂಲ ವ್ಯಕ್ತಿ, ಮಂಜೇಶ್ವರ ಗೋವಿಂದ ಪೈ ಸ್ಮಾರಕ ಕಾಲೇಜಿನ ಉಪನ್ಯಾಸಕ ಮೊಹಮ್ಮದ್ ಅಲಿ ಮಾತನಾಡಿ, ಜಾಗತಿಕ ತಾಪಮಾನ ದಿನೇ ದಿನೇ ಏರುತ್ತಿದ್ದರೂ, ಹವಾಮಾನ ವೈಪರೀತ್ಯ, ಪ್ರಕೃತಿ ವಿಕೋಪ ನಮ್ಮ ನಾಡನ್ನು ತತ್ತರಿಸುತ್ತಿದ್ದರೂ, ಉಸಿರಾಡುವ ಶುದ್ಧ ವಾಯುವಿಗೆ ಹಣ ತೆರಬೇಕಾದ ಪರಿಸ್ಥಿತಿ ಎದುರಾದರೂ, ಬೇಸಿಗೆಯಲ್ಲಿ ಕುಡಿಯಲು ನೀರಿಲ್ಲದೆ ಅಲೆದಾಡಿದರೂ,
ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ವತಿಯಿಂದ ಎನ್ನೆಸ್ಸೆಸ್ ಯೋಜನಾಧಿಕಾರಿಗೆ ಸನ್ಮಾನ
ಬದಿಯಡ್ಕ: ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಸಪ್ತ ದಿನ ಶಿಬಿರದ ಯಶಸ್ಸಿಗೆ ಹಗಳಿರುಲ್ಲೆನ್ನದೆ ಶ್ರಮಿಸಿದ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ ಯೋಜನಾಧಿಕಾರಿ ಸುರೇಶ್ ಕೆ. ಎಂ. ಅವರನ್ನು ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ನಾರಂಪಾಡಿ ಘಟಕದ ವತಿಯಿಂದ ಸನ್ಮಾನಿಸಲಾಯಿತು. ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ನಾರಂಪಾಡಿ ಘಟಕದ ಕಾರ್ಯದರ್ಶಿ ಶ್ರೀಧರ್ ಪದ್ಮಾರ್ ಶಾಲು ಹೊದಿಸಿ ಅಭಿನಂದಿಸಿದರು. ಕೆವಿವಿಇಎಸ್ ನ ಜತೆ ಕಾರ್ಯದರ್ಶಿ ಗೋಪಾಲ ಕೃಷ್ಣ ಉಪ್ಪಂಗಳ ಹಣ್ಣು ಹಂಪಲು ನೀಡಿ