×
Nalanda College
Nalanda College of Arts & Science

Nalanda College of Arts & Science

A unit of : Vivekananda VidyaVardhaka Sangha Puttur (R)

ವಿದ್ಯಾರ್ಥಿಗಳಲ್ಲಿನ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ಆರ್ಟ್ಸ್ ಡೇ ಸಹಕಾರಿ

ಪೆರ್ಲ ನಾಲಂದ ಕಾಲೇಜಿನಲ್ಲಿ ನಡೆದ ಆರ್ಟ್ಸ್ ಡೇ ಉದ್ಘಾಟಿಸಿ ಡಾ. ವಿಘ್ನೇಶ್ವರ ವರ್ಮುಡಿ ವಿದ್ಯಾರ್ಥಿಗಳಲ್ಲಿ ಅಗಾಧ ಪ್ರತಿಭೆಗಳು ಅಡಕವಾಗಿರುತ್ತದೆ. ಆದರೆ ಸೂಕ್ತ ಮಾರ್ಗದರ್ಶನ, ಪ್ರೋತ್ಸಾಹದ ಕೊರತೆಯಿಂದಲೋ ತಮ್ಮಲ್ಲಿ ಅಡಕವಾಗಿರುವ ಪ್ರತಿಭೆಗಳ ಅರಿವು ಅವರಿಗೆ ಇರುವುದಿಲ್ಲ. ವಿದ್ಯಾರ್ಥಿಗಳಲ್ಲಿನ ಅಂತಹ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ಆರ್ಟ್ಸ್ ಡೇ ಸಹಕಾರಿ ಎಂದು ನಾಲಂದ ಕಾಲೇಜು ಪ್ರಾಂಶುಪಾಲ ಡಾ. ವಿಘ್ನೇಶ್ವರ ವರ್ಮುಡಿ ಹೇಳಿದರು. ಪೆರ್ಲ ನಾಲಂದ ಕಾಲೇಜಿನಲ್ಲಿ ನಡೆದ ಆರ್ಟ್ಸ್ ಡೇ ಉದ್ಘಾಟಿಸಿ ಅವರು ಮಾತನಾಡಿದರು. ಎಳೆ ವಯಸ್ಸಿನಲ್ಲಿಯೇ ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ಪ್ರತಿಭೆಗಳನ್ನು

Read More

ವಿದ್ಯಾರ್ಥಿಗಳು ರಾಷ್ಟ್ರವನ್ನು ರೂಪಿಸುವ ಇಂದಿನ ಶಕ್ತಿಗಳು

ಪೆರ್ಲ ನಾಲಂದ ಕಾಲೇಜು ಯೂನಿಯನ್ ಹಾಗೂ ಫೈನ್ ಆರ್ಟ್ಸ್ ಉದ್ಘಾಟನಾ ಸಮಾರಂಭ “ಉದ್ಭವ್ ೨ಕೆ೨೦” ಉದ್ಘಾಟಿಸಿ ಕ್ಯಾಂಪ್ಕೋ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ ವಿದ್ಯಾರ್ಥಿಗಳು ರಾಷ್ಟ್ರವನ್ನು ರೂಪಿಸುವ ಮಹತ್ವದ ಜವಾಬ್ದಾರಿ ಹೊತ್ತ ಇಂದಿನ ಶಕ್ತಿಗಳು. ಎಲ್ಲಾ ಕ್ಷೇತ್ರಗಳಲ್ಲೂ ಗಮನಾರ್ಹ ಸಾಧನೆ ಗೈಯುತ್ತಿರುವ ಭಾರತವನ್ನು ಜಗತ್ತೇ ಎದುರು ನೋಡುತ್ತಿದ್ದು, ರಾಷ್ಟ್ರವನ್ನು ಇನ್ನಷ್ಟು ಉತ್ತುಂಗಕ್ಕೆ ಏರಿಸಲು ವಿದ್ಯಾರ್ಥಿಗಳು ಇಂದೇ ಕಾರ್ಯಪ್ರವೃತ್ತರಾಗಬೇಕು ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ ಹೇಳಿದರು. ಪೆರ್ಲ ನಾಲಂದ ಕಾಲೇಜು ಯೂನಿಯನ್ ಹಾಗೂ ಫೈನ್ ಆರ್ಟ್ಸ್

Read More

ನಾಲಂದ ಕಾಲೇಜು ಯಕ್ಷಗಾನ ತಂಡದ ತರಬೇತುದಾರರಿಗೆ ಸನ್ಮಾನ

ಪೆರ್ಲ: ಪೆರ್ಲ ನಾಲಂದ ಕಾಲೇಜು ಯುನಿಯನ್ ಹಾಗೂ ಫೈನ್ ಆರ್ಟ್ಸ್ ಉದ್ಘಾಟನಾ ಸಮಾರಂಭ ’ಉದ್ಭವ್ 2ಕೆ20’ ಕಾರ್ಯಕ್ರಮದಲ್ಲಿ 2018-19 ನೇ ಸಾಲಿನ ಕಣ್ಣೂರು ವಿಶ್ವವಿದ್ಯಾಲಯ ಕಲೋತ್ಸವದಲ್ಲಿ ಪ್ರಥಮ ಪ್ರಶಸ್ತಿ ವಿಜೇತ ನಾಲಂದ ಕಾಲೇಜು ಯಕ್ಷಗಾನ ತಂಡದ ತರಬೇತುದಾರ ಬಾಲಕೃಷ್ಣ ಉಡ್ಡಂಗಳ ಅವರನ್ನು ಕಾಲೇಜು ಯೂನಿಯನ್ನ ವತಿಯಿಂದ ಸನ್ಮಾನಿಸಲಾಯಿತು.

Read More

ವಾರ್ಷಿಕ ಕ್ರೀಡಾಕೂಟದಲ್ಲಿ ನಿವೃತ್ತ ದೈಹಿಕ ಶಿಕ್ಷಕರಿಗೆ ಸನ್ಮಾನ

ಪೆರ್ಲ: ಪೆರ್ಲ ನಾಲಂದ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಕಾಲೇಜು ಮಟ್ಟದ ವಾರ್ಷಿಕ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭದಲ್ಲಿ ಪಾಣಾಜೆ ಸುಭೋಧ ಪ್ರೌಢ ಶಾಲೆಯ ನಿವೃತ್ತ ದೈಹಿಕ ಶಿಕ್ಷಕ ಪುರಂದರ ಎಂ. ಜಿ. ಯವರನ್ನು ಸನ್ಮಾನಿಸಲಾಯಿತು. ಪ್ರೊ ಕಬ್ಬಡಿ ತರಬೇತುದಾರ ಜಗದೀಶ್ ಕುಂಬಳೆ, ನಾಲಂದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಆನೆಮಜಲು ವಿಷ್ಣು ಭಟ್, ಪ್ರಾಂಶುಪಾಲ ಡಾ. ವಿಘ್ನೇಶ್ವರ ವರ್ಮುಡಿ ಮತ್ತಿತರರು ಉಪಸ್ಥಿತರಿದ್ದರು.

Read More

ಕಣ್ಣೂರು ವಿಶ್ವವಿದ್ಯಾಲಯ ಕಲೋತ್ಸವ| ನಾಲಂದ ಕಾಲೇಜು ಯಕ್ಷಗಾನ ತಂಡಕ್ಕೆ ತೃತೀಯ

ಪಯ್ಯನ್ನೂರು ಕಾಲೇಜಿನಲ್ಲಿ ನಡೆದ 2019-20 ನೇ ಸಾಲಿನ ಕಣ್ಣೂರು ವಿಶ್ವವಿದ್ಯಾಲಯ ಕಲೋತ್ಸವದ ಯಕ್ಷಗಾನ ಸ್ಪರ್ಧೆಯಲ್ಲಿ ಪೆರ್ಲ ನಾಲಂದ ಕಾಲೇಜು ತಂಡ ‘ಎ’ ಗ್ರೇಡ್ ನೊಂದಿಗೆ ತೃತೀಯ ಸ್ಥಾನ ಗಳಿಸಿದೆ. ಕಾಲೇಜು ತೃತೀಯ ಬಿಕಾಂ ವಿದ್ಯಾರ್ಥಿನಿಗಳಾದ ರೂಪ, ನಿಶಾ, ಅಕ್ಷತಾ, ಬಿ ಎ ವಿದ್ಯಾರ್ಥಿನಿ ಭವ್ಯ, ದ್ವಿತೀಯ ವರ್ಷ ಬಿಕಾಂ ವಿದ್ಯಾರ್ಥಿಗಳಾದ ಅಕ್ಷಯ್, ದೀಕ್ಷಿತ್, ಬಿ ಎ ವಿದ್ಯಾರ್ಥಿನಿ ಅಶ್ವಿನಿ, ಪ್ರಥಮ ವರ್ಷ ಬಿ ಎ ವಿದ್ಯಾರ್ಥಿ ಮನೋಹರ ಪ್ರಸಾದ್, ಬಿ ಎಸ್ ಸಿ ವಿದ್ಯಾರ್ಥಿನಿ ಭವಿಷ್ಯ ಯಕ್ಷಗಾನ

Read More

ಟೆಲೆಂಟ್ಸ್ ಹಂಟ್ 2ಕೆ20

ಸೋತರೆ ಕುಗ್ಗಬೇಡಿ, ಗೆದ್ದರೆ ಹಿಗ್ಗಬೇಡಿ ಪೆರ್ಲ ನಾಲಂದ ಕಾಲೇಜಿನಲ್ಲಿ ನಡೆದ ’ಟೆಲೆಂಟ್ಸ್ ಹಂಟ್ 2ಕೆ20’ ಸಮಾರೋಪ ಕಾರ್ಯಕ್ರಮದಲ್ಲಿ ಶಶಿಭೂಷಣ ಶಾಸ್ತ್ರಿ ಸೋತವರು ಕುಗ್ಗಬಾರದು, ಗೆದ್ದವರು ಹಿಗ್ಗಬಾರದು. ಸೋತವರು ಮುಂದಿನ ಸ್ಪರ್ಧೆಗಳಿಗೆ ಬೇಕಾದ ತಯಾರಿಯಲ್ಲಿ ತೊಡಗಬೇಕು. ಗೆದ್ದವರು ತಾವು ಬಂದ ದಾರಿಯನ್ನು ಮೆಲುಕು ಹಾಕುತ್ತಾ, ಸೋತವರನ್ನು ಹೀಯಾಳಿಸದೇ ಸನ್ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಪೆರ್ಲ ಸೇವಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ, ನಾಲಂದ ಕಾಲೇಜು ಆಡಳಿತ ಮಂಡಳಿಯ ಸದಸ್ಯ ಶಶಿಭೂಷಣ ಶಾಸ್ತ್ರಿ ಹೇಳಿದರು. ಪೆರ್ಲ ನಾಲಂದ ಕಾಲೇಜಿನಲ್ಲಿ ಹೈಯರ್ ಸೆಕೆಂಡರಿ ಹಾಗೂ ಕಾಲೇಜು

Read More

ಹುತಾತ್ಮರ ದಿನಾಚರಣೆ

ಗಾಂಧೀಜಿಯ ಅಹಿಂಸಾ ನಡೆ ಮಾದರಿ : ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ನೇತೃತ್ವದಲ್ಲಿ ನಡೆದ ಹುತಾತ್ಮರ ದಿನಾಚರಣೆಯಲ್ಲಿ ಉಪನ್ಯಾಸಕಿ ವಿನೀಷಾ ಹಿಂಸೆಯಿಂದ ಸಾಧಿಸಲು ಅಸಾಧ್ಯವಾದುದನ್ನು ಅಹಿಂಸೆಯಿಂದ ಸಾಧಿಸಬಹುದು ಎಂದು ಸ್ವಾತಂತ್ರ್ಯ ಹೋರಾಟದ ಮುಖಾಂತರ ಜಗತ್ತಿಗೆ ಸಾರುವಲ್ಲಿ ಗಾಂಧೀಜಿ ಯಶಸ್ವಿಯಾಗಿದ್ದರು. ಗಾಂಧೀಜಿಯ ಅಹಿಂಸಾ ನಡೆ ಪ್ರತಿ ರಾಷ್ಟ್ರಕ್ಕೂ, ಪ್ರತಿ ವ್ಯಕ್ತಿಗೂ ಮಾದರಿ ಎಂದರು. ಎಂದು ಮಲಯಾಳಂ ವಿಭಾಗದ ಉಪನ್ಯಾಸಕಿ ವಿನೀಷಾ ಹೇಳಿದರು. ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ನೇತೃತ್ವದಲ್ಲಿ ನಡೆದ ಹುತಾತ್ಮರ ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ

Read More

ಅವಕಾಶಗಳನ್ನು ಸದುಪಯೋಗಪಡಿಸಿಕೊಂಡಾಗ ಪ್ರತಿಭೆಗಳ ಅನಾವರಣ

ಪೆರ್ಲ ನಾಲಂದ ಕಾಲೇಜಿನಲ್ಲಿ ನಡೆದ ಟೆಲೆಂಟ್ಸ್ ಹಂಟ್ 2ಕೆ20 ಉದ್ಘಾಟಿಸಿ ಕಜಂಪಾಡಿ ಸುಬ್ರಮಣ್ಯ ಭಟ್ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಒಂದೊಂದು ರೀತಿಯ ವಿಶಿಷ್ಟ ಪ್ರತಿಭೆ ಅಡಕವಾಗಿದೆ. ಆ ಪ್ರತಿಭೆಗಳು ತನ್ನಲ್ಲಿ ಅಡಕವಾಗಿದೆ ಎಂದು ತಿಳಿಯಲು ಸಾಧ್ಯವಾಗದ ಕಾರಣ ಅವುಗಳು ಸುಪ್ತವಾಗಿಯೇ ಇರುತ್ತದೆ. ಪ್ರತಿಭೆಗಳ ಪ್ರದರ್ಶನಕ್ಕೆ ಲಭಿಸಿದ ಅವಕಾಶವನ್ನು ಸದುಪಯೋಗಪಡಿಸಿಕೊಂಡಾಗ ಆ ಪ್ರತಿಭೆಗಳು ಅನಾವರಣಗೊಳ್ಳುತ್ತದೆ ಎಂದು ನಾಲಂದ ಕಾಲೇಜು ಆಡಳಿತ ಮಂಡಳಿ ಆಹ್ವಾನಿತ ಗೌರವ ಸಲಹೆಗಾರ, ನಾಲಂದ ಟ್ರಸ್ಟ್ ಅಧ್ಯಕ್ಷ ಕಜಂಪಾಡಿ ಸುಬ್ರಮಣ್ಯ ಭಟ್ ಹೇಳಿದರು. ಹೈಯರ್ ಸೆಕೆಂಡರಿ ಹಾಗೂ ಕಾಲೇಜು

Read More

ವಿದ್ಯಾರ್ಥಿಗಳಲ್ಲಿ ಪ್ರಚಲಿತ ವಿದ್ಯಮಾನಗಳ ಅರಿವು ಅಗತ್ಯ

ಬಿ – ಕ್ವಿಜ್ 2019 ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ  ಡಾ.ವಿಘ್ನೇಶ್ವರ ವರ್ಮುಡಿ ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆ ಇದ್ದರೆ ಏನನ್ನೂ ಸಾಧಿಸಬಹುದು. ಇತ್ತೀಚಿನ ದಿನಗಳಲ್ಲಿ ಜ್ಞಾನದಾಹ ಕಡಿಮೆಯಾಗುತ್ತಿದೆ. ಜೀವನದಲ್ಲಿ ಸಾಧನೆಯ ಗುರಿ, ಛಲ, ಗುರುವಿನ ಆಶೀರ್ವಾದವಿದ್ದರೆ ಮಾತ್ರವೇ ವಿದ್ಯೆ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಸಾಧ್ಯ ಎಂದು ನಾಲಂದ ಮಹಾವಿದ್ಯಾಲಯ ಪ್ರಿನ್ಸಿಪಾಲ್ ಡಾ. ವಿಘ್ನೇಶ್ವರ ವರ್ಮುಡಿ ಹೇಳಿದರು. ಪೆರ್ಲ ನಾಲಂದ ಮಹಾವಿದ್ಯಾಲಯದಲ್ಲಿ ನಡೆದ ಬಿ – ಕ್ವಿಜ್ 2019 ರಸಪ್ರಶ್ನೆ ಫೈನಲ್ ಸ್ಪರ್ಧೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು

Read More

ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಸ್ವಚ್ಛತೆಗೆ ಆದ್ಯತೆ ನೀಡಲಿ

ಅಗಲ್ಪಾಡಿ ಶಾಲೆಯಲ್ಲಿ ನಡೆಯುತ್ತಿರುವ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ಸಪ್ತದಿನ ಶಿಬಿರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟಿಸಿ ಶಾಂತ ಎಸ್. ಭಟ್ ವಿದ್ಯಾರ್ಥಿಗಳು ಪುಸ್ತಕ ಜ್ಞಾನಕ್ಕೆ ಸೀಮಿತಗೊಳ್ಳದೆ, ಸುತ್ತು ಮುತ್ತಲಿನ ಪರಿಸರದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ವಾರ್ಡು ಸದಸ್ಯೆ, ಶಿಬಿರದ ಸಂಯೋಜಕ ಸಮಿತಿಯ ಅಧ್ಯಕ್ಷೆ ಶಾಂತ ಎಸ್. ಭಟ್ ಹೇಳಿದರು. ಎನ್ನೆಸ್ಸೆಸ್ ವಿದ್ಯಾರ್ಥಿಗಳು ಸ್ವಚ್ಛತೆಯ ಕಾರ್ಯ ಹಮ್ಮಿಕೊಳ್ಳುವ ಮುಖಾಂತರ ಸಾರ್ವಜನಿಕರಿಗೆ ಸ್ವಚ್ಛತೆಯ ಮಹತ್ವವನ್ನು ಸಾರಿ ಹೇಳಿದ್ದಾರೆ. ಇದೇ ರೀತಿ ಸ್ವಚ್ಛ ಮಾಡುತ್ತಿರಲು ಬೇರೆ ಯಾರಾದರೂ ಬರಬೇಕೆಂದಿಲ್ಲ,

Read More