×
Nalanda College
Nalanda College of Arts & Science

Nalanda College of Arts & Science

A unit of : Vivekananda VidyaVardhaka Sangha Puttur (R)

ಉದ್ಯೋಗಾರ್ಥಿಗಳ ನೇಮಕಾತಿ ಪ್ರಕ್ರಿಯೆ

ಮಾನವನಿಗೆ ಉದ್ಯೋಗ ಅತೀ ಅಗತ್ಯ. ಇಂದಿನ ಸ್ಪರ್ಧಾತ್ಮಕ ಬದುಕಿನಲ್ಲಿ ಸಿಕ್ಕಿದ ಅವಕಾಶಗಳನ್ನು ಪೂರ್ಣವಾಗಿ ಬಳಸಿಕೊಂಡು ನಮ್ಮ ಬದುಕನ್ನು ಸಾರ್ಥಕಗೊಳಿಸುವುದರ ಜೊತೆಗೆ ದೇಶ ಅಭಿವೃದ್ಧಿಗೊಳ್ಳಬೇಕು ಎಂದು ಪೆರ್ಲ ನಾಲಂದ ಮಹಾವಿದ್ಯಾಲಯದ ಪ್ಲೇಸ್ಮೆಂಟ್ ಸೆಲ್‌ನ ವತಿಯಲ್ಲಿ ನಡೆದ ಉದ್ಯೋಗಾರ್ಥಿಗಳ ನೇಮಕಾತಿ ಪ್ರಕ್ರಿಯೆಯನ್ನು ಪೆರ್ಲ ಸೇವಾ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ಪಿ. ರಾಜಾರಾಮ ಬಾಳಿಗರು ಉದ್ಘಾಟಿಸಿ ನುಡಿದರು. ನಾವು ಪದವಿ ಮುಗಿಸಿದ ಸಂದರ್ಭದಲ್ಲಿ ವೃತ್ತಿಯನ್ನು ಅರಸುತ್ತ ನಗರಗಳಲ್ಲಿ ಅಲೆಯಬೇಕಾಗಿತ್ತು. ಆದರೆ ಇಂದಿನ ಆದುನಿಕ ಯುಗದಲ್ಲಿ ಉದ್ಯಮಗಳು ಉದ್ಯೋಗಾರ್ಥಿಗಳನ್ನು ಹುಡುಕಿಕೊಂಡು ಬರುತ್ತಿವೆ. ಇದು

Read More

4th international Yoga Day

In connection with the 4th international Yoga Day, a workshop on Yoga was conducted on 20-06-2018 at Nalanda College of Arts & Science, Perla. Smt. Reshma, a member of Arts of Living, Bangalore was the Chief Guest and she gave various tips on Yoga to the teachers & students of the college.

Read More

ಪೆರ್ಲ ನಾಲಂದ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಪೆರ್ಲ ನಾಲಂದ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಭೂಮಿತ್ರ ಸೇನಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ.ವಿಘ್ನೇಶ್ವರ ವರ್ಮುಡಿ ಮತ್ತು ಕಾಲೇಜಿನ ಆಡಳಿತಾಧಿಕಾರಿ ಕೆ. ಶಿವಕುಮಾರ್ ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪರಿಸರ ಸಂರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ ಪರಿಸರ ಸಮತೋಲನವನ್ನು ಕಾಯ್ದಕೊಂಡು ಪರಿಸರದ ಬಗ್ಗೆ ಸದಾ ಕಾಳಜಿ ವಹಿಸಬೇಕೆಂದು ನುಡಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಶಂಕರ ಖಂಡಿಗೆ,

Read More

ನಾಲಂದದಲ್ಲಿ ಸರ್ಟಿಫಿಕೇಟ್ ಕೋರ್ಸ್

ಶ್ರದ್ಧೆ, ಪ್ರಾಮಾಣಿಕತೆ ಮತ್ತು ನಿರಂತರ ಪರಿಶ್ರಮವಿದ್ದರೆ ಮಾತ್ರ ಇಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆಯನ್ನು ಮಾಡಲು ಸಾಧ್ಯ ಎಂದು ಪೆರ್ಲ ಸಿಂಡಿಕೇಟ್ ಬ್ಯಾಂಕ್ ಮ್ಯಾನೇಜರ್ ಸಚಿನ್‌ರವರು ನುಡಿದರು. ಕಾಲೇಜಿನ ವಾಣಿಜ್ಯ ಮತ್ತು ಮೇನೇಜ್‌ಮೆಂಟ್ ವಿಭಾಗದ ವತಿಯಿಂದ ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ಮತ್ತು ಜಿ.ಎಸ್.ಟಿ ಎಂಬ ಎರಡು ಸರ್ಟಿಫಿಕೇಟ್ ಕೋರ್ಸ್‌ಗಳನ್ನು ಉದ್ಘಾಟಿಸಿ ಮಾತನಾಡುತ್ತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಇದೊಂದು ಸುವರ್ಣಾವಕಾಶ ಇದನ್ನು ಪೂರ್ಣವಾಗಿ ಬಳಸಿಕೊಂಡು ಮುಂದೆ ಬರುವ ಪರೀಕ್ಷೆಗಳನ್ನು ಧೈರ್ಯದಿಂದ ಎದುರಿಸಿ ಜೀವನದಲ್ಲಿ ಉತ್ತಮ ಉದ್ಯೋಗವನ್ನುಗಳಿಸುವಂತಾಗಲಿ ಎಂದು ಶುಭಹಾರೈಸಿದರು.

Read More

ಕೌಶಲ್ಯಾಭಿವೃದ್ಧಿ ವಿಶೇಷ ಉಪನ್ಯಾಸ

ಇಂದಿನ ಯಾಂತ್ರಿಕ ಬದುಕಿನಲ್ಲಿ ಭಾಷಾ ಕೌಶಲ್ಯ, ಬೌದ್ಧಿಕತೆಗಳನ್ನು ಬೆಳೆಸಿಕೊಂಡರೆ ಮಾತ್ರ ಬದುಕಿನಲ್ಲಿ ಉತ್ತಮ ಸ್ಥಾನವನ್ನು ಗಳಿಸಲು ಸಾಧ್ಯ ಎಂದು ಪುತ್ತೂರು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಎಂ.ಬಿ.ಎ ವಿಭಾಗದ ಉಪನ್ಯಾಸಕ ಪ್ರೊ. ರಾಕೇಶ್‌ರವರು ನುಡಿದರು. ಅವರು ಪೆರ್ಲ ನಾಲಂದ ಮಹಾ ವಿದ್ಯಾಲಯದಲ್ಲಿ ಕೌಶಲ್ಯಾಭಿವೃದ್ಧಿಯ ಬಗೆಗೆ ವಿಶೇಷ ಉಪನ್ಯಾಸವನ್ನು ನೀಡುತ್ತ ಪ್ರಾಮಾಣಿಕತೆ, ಪರಿಶ್ರಮಗಳು ಮಾನವನ ಗುರಿ ಸಾಧನೆಯ ಮಾರ್ಗಗಳು ಈಸಬೇಕು ಇದ್ದು ಜಯಿಸಬೇಕು ಎಂಬ ಛಲವನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡರೆ ಜೀವನದಲ್ಲಿ ಮಹೋನ್ನತಿಯನ್ನು ಪಡೆದ ಸಾಧಕರಾಗಬಹುದು. ಅಂತಹ ವ್ಯಕ್ತಿಗಳಿಗೆ ಇಂದು ಸಾಕಷ್ಟು

Read More

ಯುಗಾದಿ ಆಚರಣೆ

ಪ್ರಕೃತಿಯಲ್ಲಿ ಚೈತನ್ಯ ತುಂಬಿ ತುಳುಕುವ ಕಾಲ ವಸಂತ ಋತು. ಅದರ ಆರಂಭದ ದಿನವನ್ನು ಹಿಂದುಗಳು ಯುಗಾದಿ ಹಬ್ಬವಾಗಿ ಆಚರಿಸುತ್ತಾರೆ ಎಂದು ಪೆರ್ಲ ನಾಲಂದ ಮಹಾವಿದ್ಯಾಲಯದ ಕಾರ್ಯನಿರ್ವಹಣಾಧಿಕಾರಿ ಕೆ.ಶಿವಕುಮಾರ್‌ರವರು ನುಡಿದರು. ಕಾಲೇಜಿನ ಯುಗಾದಿ ಹಬ್ಬದ ಆಚರಣೆಯಲ್ಲಿ ಶುಭವನ್ನು ಹಾರೈಸುತ್ತಾ ಗಣಿತ ಶಾಸ್ತ್ರವನ್ನು ಅವಲಂಬಿಸಿಕೊಂಡು ಜೋತಿಷ್ಯ ಶಾಸ್ತ್ರ ನಿಂತಿದೆ. ಅದನ್ನು ಹೊಂದಿಕೊಂಡು ಹಿಂದುಗಳ ಆಚರಣೆಗಳು ನಡೆಯುತ್ತವೆ. ಚೈತ್ರ ಮಾಸದ ಬಗೆಗೆ ಹಾಡದ ಕವಿಗಳಿಲ್ಲ. ಪ್ರಕೃತಿಯಲ್ಲಿ ಕೊರಡೂ ಕೊನರುತ್ತದೆ. ಮರಗಿಡಗಳು ಸಂಪದ್ಭರಿತವಾಗುತ್ತದೆ. ಪ್ರಕೃತಿಯ ಒಂದಂಗವಾದ ಮಾನವನಿಗೂ ಸುಖದ ಸಂಪತ್ತಿನ ಕಾಲ ಇದಾಗಿದೆ.

Read More

ನಾಲಂದದ ವಾರ್ಷಿಕೋತ್ಸವ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಸುದೃಡರು ಎಂದು ನಿವೃತ್ತ ಐ.ಎ.ಎಸ್ ಅಧಿಕಾರಿ ಶಶಿಧರನ್ ಕೂಡ್ಲು ಅವರು ಪೆರ್ಲ ನಾಲಂದ ಮಹಾವಿದ್ಯಾಲಯದ ವಾರ್ಷಿಕೋತ್ಸವನ್ನು ಉದ್ಘಾಟಿಸಿ ನುಡಿದರು. ಗ್ರಾಮೀಣ ವಿದ್ಯಾರ್ಥಿಗಳು ಉತ್ತಮ ಪ್ರತಿಭಾವಂತರು, ಯಾವುದೇ ಸಂದರ್ಭದಲ್ಲಿ ಎಲ್ಲರೊಂದಿಗೆ ಹೊಂದಿಕೊಂಡು. ಜೀವನ ಮಾಡು, ದುಡಿಯುವ ಸಾಮರ್ಥ್ಯವನ್ನು ಹೊಂದಿದವರು. ವಿದ್ಯಾರ್ಥಿ ಜೀವನವನ್ನು ಮುಗಿಸಿ ಸಾಮಾಜಿಕ ಬದುಕಿಗೆ ಕಾಲಿರಿಸುವಾಗ ತುಂಬ ಜವಾಬ್ದಾರಿಗಳಿರುತ್ತವೆ. ನನಗೆ ಕಾಲೇಜಿನ ಪರಿಸರ ಮತ್ತು ವಿದ್ಯಾರ್ಥಿಗಳ ಸ್ವಭಾವ ಸಂತೋಷವನ್ನು ತಂದಿದೆ ಎಂದು ಶುಭಹಾರೈಸಿ ಕಾಲೇಜಿನಲ್ಲಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ

Read More

ಕು| ಅರ್ಪಿತಾಗೆ ಅಭಿನಂದನೆ

ಕಣ್ಣೂರು ವಿಶ್ವವಿದ್ಯಾನಿಲಯದ 2016-17  ನೇ ಶೈಕ್ಷಣಿಕ ವರ್ಷದ ಬಿ.ಎಸ್ಸಿ ಜಿಯೋಗ್ರಫಿ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಪಡೆದು ಕೀರ್ತಿ ತಂದ ಶ್ರೀಮತಿ.ಲಕ್ಷ್ಮೀ ಮತ್ತು ಶ್ರೀ ಕುಟ್ಟಿಯಾಪು ದಂಪತಿಗಳ ಸುಪುತ್ರಿ ಕುಮಾರಿ ಅರ್ಪಿತಾ ಕೆ. ಅವರಿಗೆ ನಾಲಂದ ಮಹಾವಿದ್ಯಾಲಯದ ಆಡಳಿತ ಮಂಡಳಿ, ಉಪನ್ಯಾಸಕ ಬಳಗ, ನೌಕರವೃಂದ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರ ಪರವಾಗಿ ಪ್ರಾಂಶುಪಾಲ ಡಾ| ವಿಘ್ನೇಶ್ವರ ವರ್ಮುಡಿಯವರು ಶಾಲು ಹೊದಿಸಿ ನೆನಪಿನಕಾಣಿಕೆ ಮತ್ತು ನಗದು ಬಹುಮಾನವನ್ನು ಕೊಟ್ಟು ಅಭಿನಂದಿಸಿ ಶುಭಹಾರೈಸಿದರು.

Read More

ವಿಶ್ವ ಮಹಿಳಾದಿನಾಚರಣೆ

ಪೆರ್ಲ ನಾಲಂದ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದ ವತಿಯಲ್ಲಿ ವಿಶ್ವ ಮಹಿಳಾದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಎಣ್ಮಕಜೆ ಗ್ರಾಮಪಂಚಾಯತ್ತಿನ ಅಧ್ಯಕ್ಷೆ ಶ್ರೀಮತಿ ರೂಪವಾಣಿ ಆರ್. ಭಟ್‌ರವರು ಮಾತನಾಡುತ್ತ ಹಿಂದೆ ಸ್ತ್ರೀಯರು ನಾಲ್ಕು ಗೋಡೆಗಳ ಮಧ್ಯೆ ಅಂತರ್ಮುಖಿಗಳಾಗಿ ಬಾಳುವ ಕಾಲ ಬಂದಿತ್ತು, ಇಂದು ಹಾಗಲ್ಲ ಇದ್ದ ಸ್ವಾತಂತ್ರ್ಯವನ್ನು ಬಳಸಿಕೊಂಡು ತಾನೇನು ಎಂಬುದನ್ನು ಸಮಾಜಕ್ಕೆ ತೋರಿಸಿಕೊಡಬೇಕು. ನಾಲ್ಕು ಗೋಡೆಯೊಳಗಿದ್ದು ಏನನ್ನೂ ಸಾಧಿಸಲು ಸಾಧ್ಯವಿಲ್ಲ ಸ್ತ್ರೀಯರನ್ನು ಜರೆಯುವ, ಟೀಕಿಸುವ ಜನರಿದ್ದಾರೆಂದು ಅಂಜುತ್ತ ಕೂರದೆ ಬಂದುದನ್ನು ಮೆಟ್ಟಿನಿಂತು ಛಲದಿಂದ ಕಾರ್ಯಸಾಧನೆಯನ್ನು ಮಾಡಬೇಕು. ಸ್ತ್ರೀ ಶಕ್ತಿ

Read More

ಜೀವನದ ಮಹೋನ್ನತಿಗೆ ಶಿಕ್ಷಣ

ಮಾನವನು ಜೀವನದಲ್ಲಿ ಗುರಿಯನ್ನು ಸಾಧಿಸಿ ಮಹೋನ್ನತಿಯನ್ನು ಪಡೆಯಬೇಕಾದರೆ ಶಿಕ್ಷಣ ಅತೀ ಅಗತ್ಯ ಎಂದು ಪುತ್ತೂರು ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ| ವಿಜಯ ಸರಸ್ವತಿಯವರು ನುಡಿದರು. ಅವರು ಪೆರ್ಲ ನಾಲಂದ ಮಹಾವಿದ್ಯಾಲಯದಲ್ಲಿ ವೃತ್ತಿ ಮಾರ್ಗದರ್ಶನದ ಬಗೆಗೆ ವಿಶೇಷ ಉಪನ್ಯಾಸವನ್ನು ನೀಡುತ್ತ ಪ್ರಸ್ತುತ ಸಮಾಜದಲ್ಲಿ ಉತ್ತಮ ಸ್ಥಾನ, ಮಾನ, ಗೌರವಗಳು ಲಭಿಸಬೇಕಾದರೆ ಸ್ನಾತಕೋತ್ತರ ಶಿಕ್ಷಣಗಳನ್ನು ಹೊಂದಿರಬೇಕು. ಇಂದಿನ ಸ್ಷರ್ಧಾತ್ಮಕ ಬದುಕಿನಲ್ಲಿ ಪ್ರತಿಕ್ಷಣವೂ ಹೊಸತನ್ನು ಕಲಿಯುತ್ತ ಕಾಲಕ್ಕೆ ತಕ್ಕಂತೆ ಬೌದ್ಧಿಕತೆಯನ್ನು ಬೆಳೆಸುತ್ತ ಹೋಗಬೇಕು. ನಾವು ನಿಂತ ನೀರಿನಂತಿರದೆ

Read More