×
Nalanda College
Nalanda College of Arts & Science

Nalanda College of Arts & Science

A unit of : Vivekananda VidyaVardhaka Sangha Puttur (R)

ವ್ಯಕ್ತಿತ್ವ ವಿಕಸನ ಮತ್ತು ನಾಯಕತ್ವ – ಕಾರ್ಯಾಗಾರ

ಪೆರ್ಲ ನಾಲಂದ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದ ವತಿಯಿಂದ ಇತ್ತೀಚೆಗೆ ವ್ಯಕ್ತಿತ್ವ ವಿಕಸನ ಮತ್ತು ನಾಯಕತ್ವ ಎಂಬ ವಿಷಯದ ಬಗ್ಗೆ ಒಂದು ದಿನದ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಪೀಪುಲ್ಸ್ ಕಾಲೇಜು ಮುನ್ನಾಡು ಇದರ ಬಿ.ಬಿ.ಎ. ವಿಭಾಗದ ಮುಖ್ಯಸ್ಥ ಮತ್ತು ಜೆ.ಸಿ.ಐ ಯ ತರಬೇತುದಾರ ಶ್ರೀ ಪುಷ್ಪಾಕರ ಬಂಡಿಚ್ಚಾಲ್‌ರವರು ಕಾರ್ಯಗಾರ ಉದ್ಘಾಟಿಸಿ ಮಾನವನು ಬದುಕಿನಲ್ಲಿ ಯಶಸ್ಸು ಗಳಿಸಬೇಕಾದರೆ ಉತ್ತಮ ಗುರಿ, ಪರಿಶ್ರಮ, ಶ್ರಧ್ಧೆ ಅತೀ ಅಗತ್ಯ ಸಮಾಜ ಸೇವೆಯ ಮೂಲಕ ಸಂಬಂಧಗಳು ಬಲಗೊಳ್ಳುತ್ತದೆ ಮತ್ತು ವ್ಯಕ್ತಿತ್ವ ವಿಕಸನವಾಗುತ್ತದೆ ಎಂದರು.

Read More

ಸ್ವಾತಂತ್ರ್ಯದ ಅರ್ಥ ಕೆಡುತ್ತಿದೆ – ಟಿ. ಆರ್. ಕೆ. ಭಟ್

ದೇಶ ಭಕ್ತ ವೀರರ ನಿರಂತರ ಹೋರಾಟದ ಫಲವಾಗಿ ಸ್ವಾತಂತ್ರ್ಯ ದೊರಕಿತು. ಅವರ ಕನಸು ನನಸಾಯಿತು. ಆದರೆ ಇಂದು ಸ್ವಾತಂತ್ರ್ಯದ ಅರ್ಥ ಕೆಡುತ್ತಿದೆ ಎಂದು ಟಿ.ಆರ್.ಕೆ ಭಟ್‌ರವರು ವಿಷಾದ ವ್ಯಕ್ತಪಡಿಸಿದರು. ಅವರು ಪೆರ್ಲ ನಾಲಂದ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣಗೈದು ಮಾತನಾಡುತ್ತಾ, ‘ನಾವು ಪಡೆದ ಸ್ವಾತಂತ್ರ್ಯ ಉಳಿಸಿಕೊಳ್ಳಬೇಕಾದರೆ ನಿರಂತರ ಹೋರಾಟದ ಅಗತ್ಯವಿದೆ ಸೂರ್ಯ ಚಂದ್ರರಿರುವಲ್ಲಿಯವರೆಗೆ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಿ’ ಎಂದು ಶುಭಹಾರೈಸಿದರು. ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಡಾ| ಜಯಗೋವಿಂದ ಉಕ್ಕಿನಡ್ಕರವರು ಕಾಲೇಜಿನಲ್ಲಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ

Read More

ಸ್ವಾತಂತ್ರ್ಯದ ಅರ್ಥ ಕೆಡುತ್ತಿದೆ – ಟಿ. ಆರ್. ಕೆ. ಭಟ್

ದೇಶ ಭಕ್ತ ವೀರರ ನಿರಂತರ ಹೋರಾಟದ ಫಲವಾಗಿ ಸ್ವಾತಂತ್ರ್ಯ ದೊರಕಿತು. ಅವರ ಕನಸು ನನಸಾಯಿತು. ಆದರೆ ಇಂದು ಸ್ವಾತಂತ್ರ್ಯದ ಅರ್ಥ ಕೆಡುತ್ತಿದೆ ಎಂದು ಟಿ.ಆರ್.ಕೆ ಭಟ್‌ರವರು ವಿಷಾದ ವ್ಯಕ್ತಪಡಿಸಿದರು. ಅವರು ಪೆರ್ಲ ನಾಲಂದ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣಗೈದು ಮಾತನಾಡುತ್ತಾ, ‘ನಾವು ಪಡೆದ ಸ್ವಾತಂತ್ರ್ಯ ಉಳಿಸಿಕೊಳ್ಳಬೇಕಾದರೆ ನಿರಂತರ ಹೋರಾಟದ ಅಗತ್ಯವಿದೆ ಸೂರ್ಯ ಚಂದ್ರರಿರುವಲ್ಲಿಯವರೆಗೆ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಿ’ ಎಂದು ಶುಭ ಹಾರೈಸಿದರು. ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಡಾ| ಜಯಗೋವಿಂದ ಉಕ್ಕಿನಡ್ಕರವರು ಕಾಲೇಜಿನಲ್ಲಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ

Read More

ಹಿರೋಶಿಮಾ ನಾಗಸಾಕಿ ದಿನಾಚರಣೆ

ಮಾನವ ಸಿಟ್ಟುಗೊಂಡಾಗ ಮನುಷ್ಯತ್ವವನ್ನು ಕಳೆದುಕೊಳ್ಳುತ್ತಾನೆ ಎಂಬುದಕ್ಕೆ ಸಾಕ್ಷಿಯಾಗಿರುವುದು ಹೀರೋಶಿಮಾ ಮತ್ತು ನಾಗಸಾಕಿ ಎಂಬುದಾಗಿ ಪೆರ್ಲ ನಾಲಂದ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಲ್ಲಿ ನಡೆದ ಹೀರೋಶಿಮಾ ನಾಗಸಾಕಿ ದಿನಾಚರಣೆಯಲ್ಲಿ ಮಾತನಾಡುತ್ತ ಇಂಗ್ಲೀಷ್ ಉಪನ್ಯಾಸಕಿ ಶಶಿರೇಖಾರವರು ಅಲ್ಲಿಯ ದಾರುಣತೆಯನ್ನು ತಿಳಿಸಿದರು. ಎರಡನೇ ಮಹಾಯುದ್ಧವು ಅಣುಬಾಂಬ್ ಪ್ರಯೋಗಿಸುವುದರ ಮೂಲಕ ಕೊನೆಗೊಂಡಿತು. ಅಂದಿನಿಂದ ಅನಂತರ ವಿಶ್ವದ ಹೆಚ್ಚಿನ ರಾಷ್ಟ್ರಗಳು ಯುದ್ಧ ಬೇಡ, ಶಾಂತಿ ಬೇಕು ಎಂದು ಅಣ್ವಸ್ತ್ರ ವಿರೋಧಿ ಒಪ್ಪಂದಕ್ಕೆ ಸಹಿ ಹಾಕಿದವು. ಮಾನವನ ಬದುಕು ಕ್ಷಣಿಕ, ಯುದ್ಧದಲ್ಲಿ, ದ್ವೇಷದಲ್ಲಿ

Read More

ನಾಲಂದದ ಶುಚಿತ್ವಾ ಪಖ್ವಾಡಾ

ಪೆರ್ಲ ನಾಲಂದಾ ಮಹಾವಿದ್ಯಾಲಯದ ಎನ್. ಎಸ್. ಎಸ್ ಘಟಕದ ವತಿಯಲ್ಲಿ ’ಶುಚಿತ್ವ ಪಖ್ವಾಡಾ’ ಕಾರ್ಯಕ್ರಮದ ಅಂಗವಾಗಿ ಎಣ್ಮಕಜೆ ಪಂಜಾಯತಿನ ನಲ್ಕ ಪ್ರದೇದ ಮನೆಯವರಿಗೆ ಪರಿಸರ ಸಂರಕ್ಷಣೆಯ ಮಹತ್ವದ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಮನೆ ಮನೆ ಅಭಿಯಾನಕ್ಕೆ ಎಣ್ಮಕಜೆ ಪಂಚಾಯತ್ತಿನ ಅಡ್ಕಸ್ಥಳ ವಾರ್ಡಿನ ಸದಸ್ಯ ಸತೀಶ್ ಕುಲಾಲ್ ನಲ್ಕರವರು ಚಾಲನೆಯನ್ನು ನೀಡಿದರು. ನಮ್ಮ ಪರಿಸರವನ್ನು ನಾವು ರಕ್ಷಿಸಿದರೆ ನಮಗೂ, ದೇಶಕ್ಕೂ ಒಳಿತು. ಪರಿಸರ ಕಲುಷಿತವಾದರೆ ನಾನಾ ರೋಗಗಳಿಗೆ ಆಹ್ವಾನ ನೀಡಿದಂತಾಗುತ್ತದೆ ಎಂದರು. ಹಮೀದ್ ನಲ್ಕರವರು ಅಭಿಯಾನಕ್ಕೆ

Read More

ನಾಲಂದದಲ್ಲಿ ಯೋಗ ತರಬೇತಿ

ಯೋಗ ಸಂಯೋಜಕ ಶ್ರೀ ಜಯರಾಮ ರವರು ದಿನಾಂಕ 4-8-2017 (ಶುಕ್ರವಾರ) ರಂದು ನಾಲಂದ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ತಿಳಿಸಿ ಯೋಗಾಸನವನ್ನು ಕಲಿಸಿಕೊಟ್ಟರು.

Read More

ನಾಲಂದದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

ಪರಿಸರ ಸಂರಕ್ಷಣೆಯೇ ನಮ್ಮ ಆರೋಗ್ಯ ರಕ್ಷಣೆ ನಮ್ಮ ಮನೆಯ ಸುತ್ತು ಮುತ್ತ ಸ್ವಚ್ಛವಾಗಿ ಇಟ್ಟು ಕೊಂಡರೆ ಸೊಳ್ಳೆಗಳಿಂದ ಹರಡುವ ಮಲೇರಿಯಾ, ಡೆಂಗ್ಯೂ, ಹಂದಿ ಜ್ವರ ಮೊದಲಾದವುಗಳನ್ನು ತಡೆಗಟ್ಟಬಹುದು. ಮಳೆ ನೀರು ಒಂದೆಡೆ ನಿಂತಾಗ ಅದರಲ್ಲಿ ಸೊಳ್ಳೆಗಳುಂಟಾಗಿ ನಾನಾ ರೀತಿಯ ರೋಗಗಳು ಹರಡಲು ಕಾರಣವಾಗುತ್ತದೆ. ವಿದ್ಯಾರ್ಥಿಗಳಾದ ನೀವು ನಿಮ್ಮ ಪರಿಸರವನ್ನು ಕಾಯ್ದುಕೊಳ್ಳಬೇಕು ಮಾತ್ರವಲ್ಲದೆ ಪರಿಸರದ ಮಹತ್ವವನ್ನು ಇತರರಿಗೆ ತಿಳಿಸಿ ಜಾಗೃತಗೊಳಿಸಬೇಕೆಂದು ಪೆರ್ಲ ಸರಕಾರಿ ಹೋಮಿಯೋ ಆಸ್ಪತ್ರೆಯ ಡಾ| ಸ್ಮಿತಾರವರು ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗಗಳ ಬಗೆಗೆ ತಿಳಿಸಿಕೊಟ್ಟರು. ಅವರು ಪೆರ್ಲ

Read More

ಎನ್.ಎಸ್.ಎಸ್‌.ನ ಮಹತ್ವದ ಬಗ್ಗೆ ಅರಿವು ಕಾರ್ಯಕ್ರಮ

ಮಾನವ ನಿಜವಾದ ಮನುಷ್ಯನಾಗುವುದು ಸಮಾಜ ಸೇವೆಯಿಂದ. ಒಬ್ಬ ವ್ಯಕ್ತಿ ಸಮರ್ಥನಾಗಿ ಬೆಳೆಯ ಬೇಕಾದರೆ ಸಮಾಜದಿಂದ ಸಾಕಷ್ಟು ಪಡೆದು ಕೊಳ್ಳುತ್ತಾನೆ. ಅದೇ ರೀತಿ ತನ್ನನ್ನು ಗುರುತಿಸಿಕೊಳ್ಳಬೇಕಾದರೆ ಸಮಾಜಕ್ಕೆ ಅರ್ಪಿಸಿಕೊಳ್ಳಬೇಕು. ನಾವು ವಿದ್ಯಾರ್ಥಿ ದೆಸೆಯಲ್ಲಿ ಸೇವಾ ಮನೋಭಾವವನ್ನು ಬೆಳೆಸಿ ಜೀವನದಲ್ಲಿ ಉಳಿಸಿಕೊಂಡರೆ ಮಾತ್ರ ಬದುಕು ಸಾರ್ಥಕವಾಗುವುದು. ಆಧುನಿಕ ಯುಗದಲ್ಲಿ ಮಾನವ ಯಾಂತ್ರಿಕನಾಗುತ್ತಾ ಸ್ವಾರ್ಥಿಯಾಗುತ್ತಿದ್ದಾನೆ. ಮಾನವೀಯತೆ, ಬಂಧುತ್ವಗಳ ಅರ್ಥ ಕ್ಷೀಣಿಸುತ್ತಿದೆ. ಅಂತಹಾ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ಸಮರ್ಪಣಾ ಭಾವ ಮೂಡಿಸಲು ರಾಷ್ಟ್ರೀಯ ಸೇವಾ ಯೋಜನೆ ಅಗತ್ಯ. ಪಾಠದ ಜೊತೆಗೆ ಸಾಧ್ಯವಾದಷ್ಟು ಸಮಾಜಸೇವೆ ಮಾಡಿ

Read More

ವಿಶ್ವಪ್ರಕೃತಿ ಸಂರಕ್ಷಣಾ ದಿನಾಚರಣೆ

ಪೆರ್ಲ: ನಾಲಂದ ಮಹಾವಿದ್ಯಾಲಯದಲ್ಲಿ ಭೂಮಿತ್ರಾ ಸೇನಾ ಘಟಕದ ವತಿಯಿಂದ ವಿಶ್ವಪ್ರಕೃತಿ ಸಂರಕ್ಷಣಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭೂಮಿತ್ರಾ ಸೇನಾ ಘಟಕದ ಅಧ್ಯಕ್ಷೆ ಕುಮಾರಿ ಭವ್ಯಶ್ರಿ ವಹಿಸಿ ಉತ್ತಮ ಜೀವನ ನಡೆಸಲು ಪ್ರಕೃತಿ ಸಂರಕ್ಷಣೆ ಅತ್ಯಗತ್ಯ ಎಂದರು. ಮುಖ್ಯ ಅತಿಥಿಯಾಗಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಅಶೋಕ ಮೊಟ್ಟಕುಂಜ ಮಾತನಾಡಿ ಜೀವಜೈವದ ಉಳಿವಿಗಾಗಿ ಪ್ರಕೃತಿ ಸಂರಕ್ಷಣೆ ಮಾಡುವುದರ ಜೊತೆಗೆ ಪರಿಸರ ಸ್ನೇಹಿಯಾಗಿ ಜೀವನ ಮೈಗೂಡಿಸಿಕೊಳ್ಳಬೇಕು. ನಮ್ಮ ಪರಿಸರದಲ್ಲಿ ಸಸ್ಯ ಸಂಪತ್ತನ್ನು ವ್ಯವಸ್ಥಿತ ರೀತಿಯಲ್ಲಿ ಬೆಳೆಸುವುದರಿಂದ ಗಾಳಿ, ಬೆಳಕು, ಆಹಾರ

Read More

ಜನಸಂಖ್ಯಾ ದಿನಾಚರಣೆ

ಆಧುನಿಕ ತಂತ್ರಜ್ಞಾನದ ಅಭಿವೃದ್ಧಿಯೊಂದಿಗೆ, ಆರ್ಥಿಕ ಅಭಿವೃದ್ಧಿಯೂ, ಮಾನವ ಸಂಪನ್ಮೂಲದ ಅಭಿವೃದ್ಧಿಯೂ ಆಗಬೇಕು. ಪ್ರತಿಯೊಬ್ಬ ಮಾನವನೂ ವಿದ್ಯಾವಂತನಾಗಿ ದೇಶಪ್ರೇಮಿಯಾಗಿ ಸಮಾಜಕ್ಕೆ ತನ್ನನ್ನು ಸಮರ್ಪಿಸಿ ಕೊಂಡಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಪೆರ್ಲ ನಾಲಂದ ಮಹಾ ವಿದ್ಯಾಲಯದ ವಾಣಿಜ್ಯ ವಿಭಾಗದ ಉಪನ್ಯಾಸಕಿ ಕುಮಾರಿ ಶ್ರುತಿಯವರು ಕಾಲೇಜಿನಲ್ಲಿ ನಡೆದ ಜನಸಂಖ್ಯಾ ದಿನಾಚರಣೆಯಂದು ನುಡಿದರು. ಎನ್.ಎಸ್.ಎಸ್ ಯೋಜನಾಧಿಕಾರಿ, ಉಪನ್ಯಾಸಕ ಶಂಕರ ಖಂಡಿಗೆಯವರು ಅಧ್ಯಕ್ಷತೆ ವಹಿಸಿ ದೇಶದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬ ಪ್ರಜೆಗೂ ತನ್ನದೇ ಆದ ಕರ್ತವ್ಯಗಳು, ಜವಾಬ್ದಾರಿಗಳಿವೆ. ಆದುದರಿಂದ ಯಾರೂ ದೇಶ

Read More