×
Nalanda College
Nalanda College of Arts & Science

Nalanda College of Arts & Science

A unit of : Vivekananda VidyaVardhaka Sangha Puttur (R)

ನಾಲಂದ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಹುತಾತ್ಮ ದಿನಾಚರಣೆ

ಪೆರ್ಲ: ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ ನೇತೃತ್ವದಲ್ಲಿ ಗುರುವಾರ ಮಹಾತ್ಮಾ ಗಾಂಧಿ ಹುತಾತ್ಮ ದಿನಾಚರಣೆ ನಡೆಯಿತು. ಕಾಮರ್ಸ್ ಹಾಗೂ ಮ್ಯಾನೇಜ್ಮೆಂಟ್ ವಿಭಾಗದ ಮುಖ್ಯಸ್ಥೆ ಮಧುರವಾಣಿ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಮಹಾತ್ಮಾ ಗಾಂಧೀಜಿಯವರ ತ್ಯಾಗ ಮಹತ್ತರವಾಗಿದ್ದು, ಅವರನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯ.ಅವರು ಮಾಡಿದ ರೀತಿಯ ತ್ಯಾಗ ನಮ್ಮಿಂದ ಅಸಾಧ್ಯವಾದರೂ ದೇಶ ಸೇವೆಗೆ ನಮ್ಮಿಂದಾಗುವ ರೀತಿಯ ಕೊಡುಗೆ ನೀಡಲು ಮುಂದಾಗಬೇಕು ಎಂದರು. ಯೋಜನಾಧಿಕಾರಿ ಸುರೇಶ್ ಕೆ.ಎಂ. ಮಾತನಾಡಿ, ಗಾಂಧೀಜಿಯವರು ಅಹಿಂಸೆ ಪರಮಧರ್ಮ ಎಂದು ಪ್ರತಿಪಾದಿಸಿದ್ದರು.ಯುವ ಜನಾಂಗ ಮಹಾ ಪುರುಷನ ತತ್ವಾದರ್ಶಗಳನ್ನು ಪಾಲಿಸಬೇಕು

Read More

ಗ್ರಂಥಾಲಯದ ನೂತನ ಪರಾಮರ್ಶನ ವಿಭಾಗ ಉದ್ಘಾಟನೆ

ವಿದ್ಯೆ ಎಂಬುದು ಕದಿಯಲಾಗದ ಸಂಪತ್ತು ಅದನ್ನು ಸಾಧ್ಯವಿದ್ದಷ್ಟು ಗಳಿಸಬೇಕು ಮತ್ತು ಬಳಸಬೇಕು ಎಂದು ಪೆರ್ಲ ಸತ್ಯನಾರಾಯಣ ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ, ನಾಲಂದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯೆ ಶ್ರೀಮತಿ ಕೆ.ವಿ ಪ್ರಭಾವತಿಯವರು ತಿಳಿಸಿದರು. ಅವರು ಪೆರ್ಲ ನಾಲಂದ ಕಾಲೇಜಿನ ಗ್ರಂಥಾಲಯದ ನೂತನ ಪರಾಮರ್ಶನ ವಿಭಾಗವನ್ನು ಉದ್ಘಾಟಿಸಿ ಮಾತನಾಡುತ್ತ ಇಂದಿನ ಬೆಳೆಯುತ್ತಿರುವ ಕಾಲಘಟ್ಟದಲ್ಲಿ ಹೊಸ ಸಂಶೋಧನಾ ಪ್ರಕ್ರಿಯೆಗಳು ನಡೆಸಬೇಕಾದರೆ ಕಾಲೇಜುಗಳಲ್ಲಿ ಪರಾಮರ್ಶನ ವಿಭಾಗ ಅತೀ ಅಗತ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕ್ಯಾಂಪ್ಕೋ ನಿರ್ದೇಶಕರು, ಕಾಲೇಜಿನ ಆಡಳಿತ ಮಂಡಳಿಯ

Read More

ಕಂಪ್ಯೂಟರ್ ಜ್ಞಾನ ಇಂದಿನ ಅಗತ್ಯ

ಇಂದಿನ ವಿದ್ಯಾಭ್ಯಾಸಕ್ಕೆ ತುಂಬಾ ಸವಲತ್ತುಗಳಿವೆ ಅದನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ವಿದ್ಯಾರ್ಥಿಗಳಾಗಿ ಸಂಸ್ಥೆಗೂ, ನಾಡಿಗೂ ಕೀರ್ತಿಯನ್ನು ತರುವಂತಾಗಲಿ ಎಂದು ಪುತ್ತೂರು ರೋಟರಿ ಕ್ಲಬ್‌ನ ಅಧ್ಯಕ್ಷರು, ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರೂ ಆದ ವಾಮನ ಪೈ ಯವರು ನುಡಿದರು. ಅವರು ಪೆರ್ಲ ನಾಲಂದ ಮಹಾವಿದ್ಯಾಲಯದ ನೂತನ ಕಂಪ್ಯೂಟರ್ ಲ್ಯಾಬ್‌ನ್ನು ಉದ್ಘಾಟಿಸಿ ಮಾತನಾಡುತ್ತಾ ಸ್ಪರ್ಧಾತ್ಮಕ ಕಾಲಘಟ್ಟದಲ್ಲಿ ಎಲ್ಲವನ್ನು ಅರಿತುಕೊಂಡು ಪ್ರತಿಯೊಂದು ಸಮಸ್ಯೆಯನ್ನು ಎದುರಿಸ ಬದುಕಬೇಕಾದರೆ ಕಂಪ್ಯೂಟರ್ ಜ್ಞಾನ ಅತೀ ಅಗತ್ಯ. ಮಾತ್ರವಲ್ಲದೆ ಜೀವನಾವಶ್ಯಕವಾಗಿದೆ. ಅದನ್ನು ಅರಿಯದವನು ಬದುಕಿ ಪ್ರಯೋಜನವಿಲ್ಲ ಎಂಬಂತಾಗಿದೆ.

Read More

ಸೈನಿಕರನ್ನು ಗೌರವಿಸುವುದು ನಮ್ಮ ಕರ್ತವ್ಯ : ಶಾಂಭವಿ

ಪೆರ್ಲ  : ಕೊರೆಯುವ ಚಳಿ, ಸುಡುವ ಬಿಸಿಲು, ಮಳೆ ಗಾಳಿಯನ್ನು ಲೆಕ್ಕಿಸದೆ ಮರುಭೂಮಿ, ಕಡಿದಾದ ಪರ್ವತ, ಹಳ್ಳ, ನದಿ, ಸಮುದ್ರವೆನ್ನದೆ ನಮ್ಮ ದೇಶದ ಗಡಿಯನ್ನು ಕಾಯುವ ಹಾಗೂ ದೇಶದ ರಕ್ಷಣೆ ಮಾಡುವ ಸೈನಿಕರ ತ್ಯಾಗ ಚಿರ ಸ್ಮರಣೀಯ.ಅವರನ್ನು ಗೌರವಾದರದಿಂದ ಕಾಣುವುದು ನಮ್ಮ ಕರ್ತವ್ಯವೂ ಹೌದು ಎಂದು ಪೆರ್ಲ ನಾಲಂದಾ ಕಾಲೇಜು ಉಪನ್ಯಾಸಕಿ ಶಾಂಭವಿ ಹೇಳಿದರು. ಪೆರ್ಲ ನಾಲಂದ ಮಹಾ ವಿದ್ಯಾಲಯದ ಎನ್ನೆಸ್ಸೆಸ್ ಘಟಕದ ನೇತೃತ್ವದಲ್ಲಿ ನಡೆದ ಭಾರತೀಯ ಸೇನಾ ದಿನಾಚರಣೆಯ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಯಾವುದೇ

Read More

ಸ್ವಾಮಿ ವಿವೇಕಾನಂದರಿಂದ ಸ್ವತಂತ್ರ, ನವ ಭಾರತ ನಿರ್ಮಾಣದ ಭದ್ರ ಬುನಾದಿ: ಅಮೃತ

ಪೆರ್ಲ: ಶ್ರೇಷ್ಟ ವ್ಯಕ್ತಿತ್ವ, ಅಪೂರ್ವ ವಾಗ್ಮೀಯತೆ ಹಾಗೂ ಪ್ರಚೋದನಾತ್ಮಕ ಬರವಣಿಗೆಗಳಿಂದ ರಾಷ್ಟ್ರ ಚೇತನವನ್ನು ಜಾಗೃತಗೊಳಿಸಿದ ವಿಶ್ವ ಚೇತನ ಸ್ವಾಮಿ ವಿವೇಕಾನಂದರು, ಯುವಕರಲ್ಲಿ ನವೋತ್ಸಾಹವನ್ನು ಕೆರಳಿಸಿ, ನಮ್ಮ ಸಂಸ್ಕೃತಿಯ ಬಗ್ಗೆ ಅರಿವು, ಹೆಮ್ಮೆ ಮೂಡಿಸಿ ಸ್ವತಂತ್ರ, ನವ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದ್ದರು ಎಂದು ನಾಲಂದ ಕಾಲೇಜು ಉಪನ್ಯಾಸಕಿ ಅಮೃತ ಹೇಳಿದರು. ನಾಲಂದ ಮಹಾವಿದ್ಯಾಲಯ ಎನ್ನೆಸ್ಸೆಸ್ ಘಟಕದಿಂದ ಸೋಮವಾರ ನಡೆದ ರಾಷ್ಟ್ರೀಯ ಯುವ ದಿನಾಚರಣೆಯಲ್ಲಿ ಅವರು ಮಾತನಾಡಿದರು. ವಿಶ್ವದಾದ್ಯಂತ ಪರ್ಯಟನೆ ನಡೆಸಿ ತಮ್ಮ ವಿಚಾರ ಧಾರೆಗಳನ್ನು ಧಾರೆ

Read More

ಆರೋಗ್ಯವಂತ ಸ್ಪರ್ಧೆಗಳು ವಿದ್ಯಾರ್ಥಿಗಳ ಸಮಗ್ರ ವಿಕಾಸಕ್ಕೆ ಪೂರಕ:ಶಶಿಭೂಷಣ ಶಾಸ್ತ್ರಿ

ಪೆರ್ಲ: ವಿದ್ಯಾರ್ಥಿ ದಿಶೆಯಲ್ಲಿಯೇ ಸ್ಪರ್ಧಾತ್ಮಕ ಮನೋಭಾವ ಮೈಗೂಡಿಸಿಕೊಳ್ಳಬೇಕು. ಸೋಲು ಗೆಲುವಿನ ಬಗ್ಗೆ ಚಿಂತಿಸದೆ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಜೀವನದ ಮುಂದಿನ ಹಾದಿ ಸುಗಮವಾಗುವುದು ಎಂದು ಪೆರ್ಲ ಸಹಕಾರಿ ಬ್ಯಾಂಕ್ ಅಧ್ಯಕ್ಷ ಶಶಿಭೂಷಣ್ ಶಾಸ್ತ್ರಿ ಹೇಳಿದರು. ಪೆರ್ಲ ನಾಲಂದ ಮಹಾವಿದ್ಯಾಲಯದಲ್ಲಿ ಶನಿವಾರ ನಡೆದ ಬಿ – ಕ್ವಿಜ್ 2019 ರಸಪ್ರಶ್ನೆಯ ಫೈನಲ್ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಒಬ್ಬ ಸೋತರಷ್ಟೇ ಇನ್ನೊಬ್ಬ ಗೆಲ್ಲಲು ಸಾಧ್ಯ.ಸ್ಪರ್ಧೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ.ಸೋಲು, ಸವಾಲುಗಳು, ಸಮಸ್ಯೆಗಳಿಂದ ನಿಷ್ಕ್ರಿಯರಾಗದೆ ತಾರ್ಕಿಕ ಜ್ಞಾನವನ್ನು ಬಳಸಿ ಸೋಲಿನ ಕಾರಣಗಳನ್ನು ತಿಳಿದುಕೊಳ್ಳಬೇಕು.ಜೀವನದಲ್ಲಿ ಬೆಳೆಯಲು

Read More

ಶಿಕ್ಷಣ ವ್ಯವಸ್ಥೆಯ ಕುರಿತು ಚಿಂತನೆ ಅನಿವಾರ್ಯ

ನಾಲಂದ ಕಾಲೇಜು ವಿವೇಕಾನಂದ ಜಯಂತಿ ಸಮಾರಂಭದ ಸಭಾಧ್ಯಕ್ಷತೆ ವಹಿಸಿ ಡಾ.ವಿಘ್ನೇಶ್ವರ ವರ್ಮುಡಿ ಅಭಿಮತ ಭವ್ಯ ಭಾರತದ ಕನಸನ್ನು ಕಂಡಿದ್ದ ಸ್ವಾಮಿ ವಿವೇಕಾನಂದರು ಶಿಕ್ಷಣ ಮತ್ತು ಯುವಕರ ಬಗ್ಗೆ ತಮ್ಮದೇ ಆದ ವಿಶಿಷ್ಟ ನಿಲುವು ಹೊಂದಿದ್ದರು. ಶಿಕ್ಷಣವೆಂದರೆ ವ್ಯಕ್ತಿತ್ವ ನಿರ್ಮಾಣ, ವ್ಯಕ್ತಿತ್ವ ನಿರ್ಮಾಣದ ಮೂಲಕ ಚಾರಿತ್ರ್ಯ ನಿರ್ಮಾಣ;ಚಾರಿತ್ರ್ಯ ನಿರ್ಮಾಣದಿಂದ ರಾಷ್ಟ್ರನಿರ್ಮಾಣ’ ಎಂದು ಪ್ರತಿಪಾದಿಸಿ ಸಕಾರಾತ್ಮಕ ಚಿಂತನೆಗಳಿಂದ ಯುವಕರನ್ನು ಪ್ರೇರೇಪಿಸುತ್ತಿದ್ದ ಅವರು ದೈಹಿಕ ಶಿಕ್ಷಣ, ಮಾನಸಿಕ ಶಿಕ್ಷಣ, ಧಾರ್ಮಿಕ ಶಿಕ್ಷಣ, ಮಹಿಳಾ ಶಿಕ್ಷಣ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿದ್ದರು ಎಂದು

Read More

ಭಾರತೀಯ ಚಿಂತನೆಗಳು ಮತ್ತು ರಾಷ್ಟ್ರೀಯತೆ – ವಿಶೇಷ ಉಪನ್ಯಾಸ

ಪ್ರತಿಯೊಂದು ವಸ್ತುವಿನಲ್ಲಿ ದೇವರನ್ನು ಕಾಣುವ ಮತ್ತು ಎಲ್ಲರನ್ನು ಗೌರವಿಸುವುದೇ ಭಾರತೀಯ ಸಂಸ್ಕೃತಿಯ ಜೀವಾಳ ಎಂದು ಸರಕಾರಿ ಪದವಿಪೂರ್ವ ಕಾಲೇಜು ತಿಪಟೂರು ಇಲ್ಲಿನ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥ ಶ್ರೀ ರಾಜೇಶ್ ಪದ್ಮಾರ್ ನುಡಿದರು. ಪೆರ್ಲ ನಾಲಂದ ಕಾಲೇಜಿನಲ್ಲಿ ’ಭಾರತೀಯ ಚಿಂತನೆಗಳು ಮತ್ತು ರಾಷ್ಟ್ರೀಯತೆ’ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ನೀಡುತ್ತಾ ಎರಡು ಸಂಸ್ಕ್ರತಿಗಳು ಮುಖಾಮುಖಿಯಾದಾಗ ಒಂದು ಉಳಿಯುವುದು ಮತ್ತೊಂದು ಅಳಿಯುವುದು. ಭಾರತೀಯ ಸಂಸ್ಕ್ರತಿಯ ಮೇಲೆ ಎಷ್ಟೇ ಪ್ರಹಾರಗಳು ನಡೆದಿದ್ದರೂ ಅದನ್ನು ಉಳಿಸಿಕೊಂಡು ಬಂದಿದ್ದಾರೆ ಅದನ್ನು ಬೆಳೆಸುವುದು ನಮ್ಮ

Read More

ವಿಶ್ವ ಪ್ರಾಣಿ ದಿನ

ಮಾನವನಂತೆ ಪ್ರಾಣಿಗಳೂ ಪ್ರಕೃತಿಯ ಒಂದಂಗ ಅವನಿಗಿರುವಷ್ಟೇ ಸ್ವಾತಂತ್ರ್ಯ ಪ್ರಾಣಿಗಳಿಗೂ ಇವೆ ಎಂದು ಕೇರಳ ಪಶು ಸಂಗೋಪನಾ ಇಲಾಖೆಯ ಮಿಥುನ್‌ರವರು ನುಡಿದರು. ಅವರು ಪೆರ್ಲ ನಾಲಂದ ಕಾಲೇಜಿನ ಎನ್.ಎಸ್.ಎಸ್. ವತಿಯಲ್ಲಿ ನಡೆದ ವಿಶ್ವ ಪ್ರಾಣಿ ದಿನದ ಸಭೆಯಲ್ಲಿ ಅತಿಥಿಗಳಾಗಿ ಮಾತನಾಡುತ್ತ ಪ್ರಾಣಿಗಳಲ್ಲೂ ಮಾನವನಂತೆ ಸ್ನೇಹ ಭಾವ ಮತ್ತು ಸ್ವಾಮಿ ನಿಷ್ಠೆಯನ್ನು ಕಾಣಬಹುದು. ಕೇರಳದಲ್ಲಿ ಹಸು, ಆಡು, ನಾಯಿ ಮುಂತಾದ ಸಾಕುಪ್ರಾಣಿಗಳ ಪೋಷಣೆ ಕಡಿಮೆಯಾಗುತ್ತಿದೆ. ಅಂತಹ ಪ್ರಾಣಿಗಳನ್ನು ಸಂರಕ್ಷಿಸಿಕೊಂಡು ಬಂದರೆ ಮಾನವನ ಬದುಕಿಗೆ ಸಹಕಾರಿಯಾಗುತ್ತದೆ. ಎಂದು ತಿಳಿಸಿ ಪ್ರಾಣಿ ರಕ್ಷಣೆಯ

Read More

ಗಾಂಧಿ ಜಯಂತಿ ಪ್ರಯುಕ್ತ ಮಹಾತ್ಮಾಗಾಂಧೀಜಿಯವರ ಚಿಂತನೆಗಳ ಪ್ರಸ್ತುತತೆ ಕುರಿತು ಉಪನ್ಯಾಸ

ಶಾಂತಿ, ತ್ಯಾಗ, ಸಹಿಷ್ಣತೆ, ಸ್ವಾವಲಂಬನೆ ಅಹಿಂಸೆ ಮೊದಲಾದ ತತ್ತ್ವಗಳನ್ನು ಜಗತ್ತಿಗೆ ಸಾರಿದವರು ಮಹಾತ್ಮಾಗಾಂಧೀಜಿ ಎಂದು ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಉಪನ್ಯಾಸಕ ಪ್ರಮೋದ್ ಎಂ.ಜಿ. ನುಡಿದರು. ಅವರು ಪೆರ್ಲ ನಾಲಂದ ಕಾಲೇಜಿನ ಎನ್.ಎಸ್.ಎಸ್ ವತಿಯಲ್ಲಿ ನಡೆದ ಮಹಾತ್ಮಾಗಾಂಧೀಜಿಯವರ ಚಿಂತನೆಗಳ ಪ್ರಸ್ತುತತೆ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡುತ್ತಾ ಇಂದಿನ ಮಾನವನ ಯಾಂತ್ರಿಕ ಬದುಕಿನಲ್ಲಿ ಗಾಂಧೀಜಿಯ ಚಿಂತನೆಗಳು ಮತ್ತು ಮಾನವೀಯ ಮೌಲ್ಯಗಳು ಅರ್ಥ ಕೆಡುತ್ತಿವೆ. ಈ ಸಂದರ್ಭದಲ್ಲಿ ಅದರ ಜಾಗೃತಿಗಾಗಿ ಗಾಂಧೀಜಿಯವರನ್ನು ಮತ್ತೆ ಮತ್ತೆ

Read More