×
Nalanda College
Nalanda College of Arts & Science

Nalanda College of Arts & Science

A unit of : Vivekananda VidyaVardhaka Sangha Puttur (R)

ಮಾದಕ ವಸ್ತುಗಳ ಸಮಸ್ಯೆ ತಿಳುವಳಿಕಾ ತರಗತಿ

ಬೇಂಗಪದವು ಶ್ರೀ ಗಿರಿಜಾಂಬ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ನಾಲಂದ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದ ಈ ವರ್ಷದ ವಿಶೇಷ ಸಪ್ತದಿನ ಶಿಬಿರದಲ್ಲಿ ಮಾದಕ ವಸ್ತುಗಳ ಸಮಸ್ಯೆ ತಿಳುವಳಿಕಾ ತರಗತಿ ದರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ ಮತ್ತು ಜಸ ಜಾಗೃತಿ ವೇದಿಕೆಯ ಕಾಸರಗೋಡು ವಲಯದ ಸಹಕಾರದಲ್ಲಿ ನಡೆಯಿತು.ಜನಜಾಗೃತಿ ವೇದಿಕೆಯ ಕಾಸರಗೋಡು ಜಿಲ್ಲಾ ಅಧ್ಯಕ್ಷರಾದ ಗೋಪಾಲ ಶೆಟ್ಟಿ ಅರಿಬೈಲು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆಯ ಮೇಲ್ವಿಚಾರಕರಾದ ಮೋಹನ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಪುಷ್ಪ

Read More

ಉತ್ತಮ ಸಮಾಜ ನಿರ್ಮಾಣಕ್ಕೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ಪಾತ್ರ ಮಹತ್ತರ ಮುಹಮ್ಮದ್ ಆಲಿ ಕೆ. ಪೆರ್ಲ

ಪೆರ್ಲ : ಬೇಂಗಪದವು ಗಿರಿಜಾಂಬ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ನಾಲಂದ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದ ಈ ವರ್ಷದ ವಿಶೇಷ ಸಪ್ತದಿನ ಶಿಬಿರದ ಅಂಗವಾಗಿ, ಶಿಕ್ಷಣದಲ್ಲಿ ಸಾಮಾಜಿಕ ಸೇವೆಯ ಮೌಲ್ಯ ಎಂಬ ವಿಷಯದ ಬಗ್ಗೆ ಸರಕಾರಿ ಕಾಲೇಜು ಕಾಸರಗೋಡಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಮತ್ತು ಭೂಮಿತ್ರ ಸೇನಾ ಕ್ಲಬ್ಬಿನ ಸಂಚಾಲಕರೂ ಆದ ಮುಹಮ್ಮದ್ ಆಲಿ ಕೆ. ಪೆರ್ಲ, ಸಮಾಜ ಬೆಳೆದರೆ ರಾಷ್ಟ್ರ ಬೆಳೆಯುವುದು, ಉತ್ತಮ ಸಮಾಜ ನಿರ್ಮಾಣಕ್ಕೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದದ್ದು ಎಂದು ಹೇಳಿದರು.

Read More

ಇಟ್ಟಿಪಳ್ಳ

ಎಣ್ಮಕಜೆ ಗ್ರಾಮ ಪಂಚಾಯತಿಗೊಳಪಟ್ಟ ಬೇಂಗಪದವು ಶ್ರೀ ಗಿರಿಜಾಂಬ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯ ಪರಿಸರದಿಂದ ಅನತಿ ದೂರದಲ್ಲಿ ಕಲ್ಲಿನಿಂದ ಕೂಡಿದ ಪ್ರದೇಶದಲ್ಲಿ ಮನೋಹರವಾದ ಒಂದು ನೀರಿನ ಸಂಗ್ರಹವಿದೆ. ಈ ಮದಕಕ್ಕೆ ಪ್ರದೇಶವಾಸಿಗಳು “ಇಟ್ಟಿಪಳ್ಳ” ಎಂದು ಕರೆಯುತ್ತಾರೆ. ಇತಿಹಾಸ ಯಾವುದೇ ಇರಲಿ ಈ ಮದಕದಲ್ಲಿ ಏಪ್ರೀಲ್ ತಿಂಗಳಲ್ಲೂ ಬತ್ತದ ನೀರಿನ ಸಂಗ್ರಹ ವಿಜ್ಞಾನಕ್ಕೆ ಒಂದು ಸವಾಲಾಗಿದೆ. ಇತ್ತೀಚೆಗೆ ಇದೇ ಪ್ರದೇಶದಲ್ಲಿ ಶಿಬಿರವನ್ನು ಹಮ್ಮಿಕೊಂಡ ನಾಲಂದ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಈ ಮದಕಕ್ಕೆ ಭೇಟಿ ಕೊಟ್ಟು ಶುಚಿಗೊಳಿಸಿದರು. ಇಂತಹ

Read More

ಬೇಂಗಪದವು-ಬಾಂಕನ-ಸೇರಾಜೆ-ದಾಸ್ರೋಕು ರಸ್ತೆ ನಿರ್ಮಾಣ

ಪೆರ್ಲ : ನಾಲಂದ ಕಾಲೇಜಿನ ಎನ್.ಎಸ್.ಎಸ್ ಘಟಕದ ಸದಸ್ಯರು ಈ ವರ್ಷದ ಶಿಬಿರದಲ್ಲಿ ಬೇಂಗಪದವು-ಬಾಂಕನ-ಸೇರಾಜೆ-ದಾಸ್ರೋಕು ರಸ್ತೆ ನಿರ್ಮಾಣ ಮಾಡಿದರು. ಸಪ್ತದಿನ ಶಿಬಿರದಲ್ಲಿ ವಿದ್ಯಾರ್ಥಿಗಳು ತಮ್ಮ ಶ್ರಮದಿಂದ, ಕುಟುಂಬಶ್ರೀಯ ಸದಸ್ಯರು, ಪ್ರದೇಶದ ಜನರ ಮತ್ತು ಯಂತ್ರದ ಸಹಾಯದಿಂದ ಸ್ಥಳೀಯ ನಿವಾಸಿಗಳ ಹಲವಾರು ವರುಷಗಳ ಬೇಡಿಕೆಯನ್ನು ಪೂರೈಸಿದರು. ಸುಮಾರು ಎರಡು ಕಿ.ಮೀ ಗಳಷ್ಟಿರುವ ಈ ರಸ್ತೆಯ ನಿರ್ಮಾಣ ಪ್ರದೇಶದ ಇಕ್ಕೆಲಗಳಲ್ಲಿ ಬೆಳೆದಿರುವ ಗಿಡ ಮತ್ತು ಕುರುಚಲು ಪೊದೆಗಳನ್ನು ಕಡಿದು ರಸ್ತೆಯ ಪ್ರಥಮ ನಿರ್ಮಾಣ ವೃತ್ತಿಯನ್ನು ಎನ್.ಎಸ್.ಎಸ್ ಘಟಕದ ಸದಸ್ಯರು ಮಾಡಿದರು.

Read More

ಬೇಂಗಪದವು-ಬಸ್ಸು ತಂಗುದಾಣ

ಪೆರ್ಲ : ನಾಲಂದ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದ ಈ ವರ್ಷದ ವಿಶೇಷ ಸಪ್ತದಿನ ಶಿಬಿರದಲ್ಲಿ ವಿದ್ಯಾರ್ಥಿಗಳು ಬೇಂಗಪದವು ಬಸ್ಸು ತಂಗುದಾಣವನ್ನು ಊರ ದಾನಿಗಳ ಸಹಾಯದಿಂದ ಕೇವಲ ಐದು ದಿನದಲ್ಲಿ ನಿರ್ಮಿಸಿ ದಾಖಲೆ ಮಾಡಿದ್ದಾರೆ. ಈ ಬಸ್ಸು ತಂಗುದಾಣವನ್ನು ಎಣ್ಮಕಜೆ ಗ್ರಾಮ ಪಂಚಾಯತ್ತಿನ ಅಧ್ಯಕ್ಷೆ ಶ್ರೀಮತಿ ರೂಪಾವಾಣಿ ಆರ್. ಭಟ್ ಲೋಕಾರ್ಪಣೆ ಮಾಡಿದರು. ಎಣ್ಮಕಜೆ ಗ್ರಾಮ ಪಂಚಾಯತು ಸದಸ್ಯ ಸತೀಶ್ ಕುಲಾಲ್ ನಲ್ಕ, ನಾಲಂದ ಕಾಲೇಜಿನ ಕಾರ್ಯನಿರ್ವಹಣಾಧಿಕಾರಿಯಾದ ಶಿವಕುಮಾರ್ ಕೆ, ಶ್ರೀ ಗಿರಿಜಾಂಬ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯ

Read More

ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಸಮಾರೋಪ

ಪೆರ್ಲ : ನಾಲಂದ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಈ ವರ್ಷದ ವಿಶೇಷ ಸಪ್ತದಿನ ಶಿಬಿರದ ಸಮಾರೋಪ ಸಮಾರಂಭ ಎಣ್ಮಕಜೆ ಗ್ರಾಮಪಂಚಾಯತ್ತಿನ ಬೇಂಗಪದವು ಶ್ರೀ ಗಿರಿಜಾಂಬ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಎಣ್ಮಕಜೆ ಗ್ರಾಮ ಪಂಚಾಯತ್ತಿನ ಅಧ್ಯಕ್ಷೆ ರೂಪವಾಣಿ ಆರ್. ಭಟ್ ಉದ್ಘಾಟಿಸಿ, ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತಾವು ತೋಡಗಿಸಿಕೊಂಡಾಗ ತಮಗೂ ದೇಶಕ್ಕೂ ಒಳಿತಾಗುತ್ತದೆ, ಈ ನಿಟ್ಟಿನಲ್ಲಿ ಕಾಲೇಜಿನ ಎನ್.ಎಸ್.ಎಸ್. ಘಟಕವು ನಿರ್ಮಿಸಿದ ಬೇಂಗಪದವು ಬಸ್ ತಂಗುದಾಣ, ಬೇಂಗಪದವು-ಬಾಂಕನ-ಸೊಮಾಜೆ-ದಾಸ್ರೋಕು ರಸ್ತೆ, ಬೇಂಗಪದವಿನಂದ ಶಾಲೆಗೆ ಬರುವ ಕಾಲುದಾರಿ

Read More

ಶ್ರಮದಾನ ಉದ್ಘಾಟನೆ

ಪೆರ್ಲ : ನಾಲಂದ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಬೇಂಗಪದವು ಶ್ರೀ ಗಿರಿಜಾಂಬ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ ಸಪ್ತ ದಿನ ವಿಶೇಷ ಶಿಬಿರದ ಶ್ರಮದಾನ ಕೆಲಸವನ್ನು ಎಣ್ಮಕಜೆ ಪಂಚಾಯತ್ತಿನ ಕ್ಷೇಮ ಅಭಿವೃದ್ಧಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶ್ರೀ ಉದಯ.ಬಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನಾಲಂದಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಅಶೋಕ ಮೋಟ್ಟಕುಂಜ,ವಿನೀಷ, ಶಾಂಭವಿ, ಸ್ಥಳೀಯರಾದ ರಾಧಾಕೃಷ್ಣ ಆಳ್ವ ಪೂವನಡ್ಕ, ಅಬ್ದುಲ್ ಲತೀಫ್ ಬೇಂಗಪದವು, ರಾಮಣ್ಣ ಪೂಜಾರಿ ಬಾಂಕನ, ಎನ್.ಎಸ್.ಎಸ್ ಯೋಜನಾಧಿಕಾರಿ ಶಂಕರ ಖಂಡಿಗೆ, ರಾಷ್ಟ್ರೀಯ

Read More

ಡಿಜಿಟಲ್ ಇಂಡಿಯ-ಕ್ಯಾಷ್ ಲೆಸ್ ಸೊಸೈಟಿ – ಸೆಮಿನಾರ್

ಪೆರ್ಲ : ನಾಲಂದ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಬೇಂಗಪದವು ಶ್ರೀ ಗಿರಿಜಾಂಬ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ ಸಪ್ತ ದಿನ ವಿಶೇಷ ಶಿಬಿರದಲ್ಲಿ “ಡಿಜಿಟಲ್ ಇಂಡಿಯ-ಕ್ಯಾಷ್ ಲೆಸ್ ಸೊಸೈಟಿ” ಎಂಬ ವಿಷಯದ ಕುರಿತು ಸೆಮಿನಾರ್ ನಡೆಯಿತು. ವಿಷ್ಣುಪ್ರಕಾಶ್ ಮುಳ್ಳೇರಿಯ ಇವರು ಸಂಪನ್ಮೂಲ ವ್ಯಕ್ತಿಯಾಗಿ ತರಗತಿಯನ್ನು ನಡೆಸಿಕೊಟ್ಟರು. ಕೇಂದ್ರ ಸರಕಾರದ ಯೋಜನೆಯಾದ ಡಿಜಿಟಲ್ ಇಂಡಿಯ-ಕ್ಯಾಷ್ ಲೆಸ್ ಸೊಸೈಟಿಯ ಕುರಿತು ಅನೇಕ ವಿಚಾರಗಳನ್ನು ತಿಳಿಸಿದರು. 500 ಮತ್ತು 1000 ಮುಖಬೆಲೆಯ ಅಪಮೌಲ್ವೀಕರಣದಿಂದ ಉದ್ಭವಿಸಿದ ಹಣದ ವಿನಿಮಯ ಮತ್ತು

Read More

ನಾಲಂದ ರಾಷ್ಟ್ರೀಯ ಸೇವಾ ಯೋಜನೆ ಸಪ್ತದಿನ ಶಿಬಿರ ಉದ್ಘಾಟನೆ

ಪೆರ್ಲ : ನಾಲಂದ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಈ ವರ್ಷದ ವಿಶೇಷ ಸಪ್ತದಿನ ಶಿಬಿರವು ಎಣ್ಮಕಜೆ ಗ್ರಾಮಪಂಚಾಯತ್ತಿನ ಬೇಂಗಪದವು ಶ್ರೀ ಗಿರಿಜಾಂಬ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಜರುಗಿತು. ಎಣ್ಮಕಜೆ ಗ್ರಾಮ ಪಂಚಾಯತ್ತಿನ ಅಧ್ಯಕ್ಷೆ ರೂಪವಾಣಿ ಆರ್ ಭಟ್ ಉದ್ಘಾಟಿಸಿ ಇಂತಹ ಶಿಬಿರವು ಮಕ್ಕಳಲ್ಲಿ ಸೃಜನಶೀಲತೆ, ವ್ಯಕ್ತಿತ್ವ ವಿಕಸನ, ಸೇವಾಮನೊಭಾವ ಬೆಳೆಸಲು, ಸಹಬಾಳ್ವೆ ಮತ್ತು ಸಮಾಜಮುಖಿ ಅಬಿವೃದ್ಧಿಗೆ ಸಹಕಾರಿ ಆಗಲಿದೆ ಎಂದರು. ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಎಣ್ಮಕಜೆ ಗ್ರಾಮ ಪಂಚಾಯತ್ತಿನ ಉಪಾಧ್ಯಕ್ಷರಾದ ಪುಟ್ಟಪ್ಪ

Read More

ಪೆರ್ಲ : ವಿವೇಕ ಉದ್ಯೋಗ ಮೇಳ ಕೌಂಟರ್ ಉದ್ಘಾಟನೆ

ಪೆರ್ಲ : 13 ಜನವರಿ 2017 ರಂದು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯಾದ ಆವರಣದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಆಯೋಜಿಸಿರುವ ಬೃಹತ್ ವಿವೇಕ ಉದ್ಯೋಗ ಮೇಳಕ್ಕೆ ಪೂರಕವಾಗಿ ಉದ್ಯೋಗಾಕಾಂಕ್ಷಿಗಳ ನೋಂದಣಿಗಾಗಿ ನಾಲಂದ ಕಾಲೇಜಿನಲ್ಲಿ ಕಾರ್ಯಾಲಯ ಉದ್ಘಾಟನೆಗೊಂಡಿತು. ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಕಾರ್ಯಾಲಯವನ್ನು ದೀಪಬೆಳಗಿಸಿ ಉದ್ಘಾಟಿಸಿದರು. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಅಧಿಕಾರಿ ವಿವೇಕ ಭಂಡಾರಿ ಉದ್ಯೋಗ ಮೇಳದ ಮಾಹಿತಿ ನೀಡಿದರು. ಕಾಲೇಜು ಆಡಳಿತ ಮಂಡಳಿ ಸದಸ್ಯರಾದ ಕೋಳಾರು ಸತೀಶ್ಚಂದ್ರ ಭಂಡಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಡಾ| ಕೆ ಕಮಲಾಕ್ಷ ಪ್ರಾಸ್ತಾವಿಕ

Read More